2:03 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸೈನ್ಸ್ ವಿಡಿಯೋ ಹೆಸರಿನಲ್ಲಿ ನೀರಿನೊಳಗೆ ಬ್ಲಾಸ್ಟ್: ಬಿಗ್​ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್

13/12/2024, 11:22

ತುಮಕೂರು(reporterkarnataka.com): ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಗೊಂಡಿದ್ದ ಡ್ರೋನ್ ಪ್ರತಾಪ್ ಅವರನ್ನು ಮತ್ತೆ ಬಂಧಿಸಲಾಗಿದೆ. ಹೊಸ ಪ್ರಕರಣವೊಂದರಲ್ಲಿ ಪೊಲೀಸರು ಪ್ರತಾಪ್ ಅವರನ್ನು ಕಂಬಿ ಹಿಂದೆ ಹಾಕಿದ್ದಾರೆ.
ಸೈನ್ಸ್ ವಿಡಿಯೋ ಹೆಸರಿನಲ್ಲಿ ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್​ ಅವರನ್ನು ಪೊಲೀಸರು ಈ ಸಲ ಬಂಧಿಸಿದ್ದಾರೆ. ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್​ ಅವರನ್ನು ದಸ್ತಗಿರಿ ಮಾಡಿದ್ದಾರೆ.
ನಿರ್ಜನ ಪ್ರದರ್ಶನದಲ್ಲಿದ್ದ ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಸ್ಫೋಟ ಆಗಿದೆ, ಬೆಂಕಿ ಸಹ ಚಿಮ್ಮಿದೆ.
ಬಾಂಬ್ ಸ್ಫೋಟಗೊಂಡ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ತೋರಿಸಿ ಪ್ರತಾಪ್‌ ಬಿಲ್ಡಪ್ ಬೇರೆ ಕೊಟ್ಟಿದ್ದರು. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್‌ ಕೂಗಿದ್ದರು. ಈ ವಿಡಿಯೋ ವೈರಲ್ ಆಗಿ ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು.
ಈ ರೀತಿ ಬ್ಲಾಸ್ಟ್ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿತ್ತು. ಯಾವೆಲ್ಲ ಕೆಮಿಕಲ್ ಹಾಕಿದರೆ ಬ್ಲಾಸ್ಟ್ ಆಗುತ್ತೆ ಎಂದು ಲೈವ್‌ನಲ್ಲಿ ಹೇಳಿದ್ದು, ಇದನ್ನು ಕಿಡಿಗೇಡಿಗಳು ಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಪರಿಸರವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದರು.
ಈ ಸಂಬಂಧ ಮಿಡಿಗೇಶಿ ಪೊಲೀಸರು ಬಿಎನ್ ಎಸ್ ಸೆಕ್ಷನ್ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು