2:46 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

4 ವರ್ಷಗಳಿಂದ ಪತ್ನಿಯ ಗೃಹ ಬಂಧನದಲ್ಲಿಟ್ಟಿದ್ದ ವೈದ್ಯ ಮಹಾಶಯ!!: ಲೆಕ್ಕದ ಊಟ, ಜತೆಗೆ ದೈಹಿಕ, ಮಾನಸಿಕ ಹಿಂಸೆ!

13/12/2024, 12:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmal.com

ಕೇವಲ 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸವೇ ಆಕೆಯ ಜೊತೆಗಾರರು. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ್ರು. ಮನೆಯಿಂದ ಹೋಗುವಾಗ ಮನೆಯಲ್ಲಿ ರೇಷನ್ ಎಲ್ಲಾ ಖಾಲಿ-ಖಾಲಿ. 3-4 ದಿನ ನೀರು ಕುಡಿದುಕೊಂಡೇ ಇರಬೇಕು. ಅದೂ ನೀರಿನ ಸಂಪರ್ಕ ಕಟ್ ಮಾಡಿರದಿದ್ರೆ. ಮನೆ ಕೆಲಸವೆಲ್ಲಾ ಮಾಡಬೇಕು. ಅಡುಗೆ-ಊಟ ಮಾಡುವಂತಿಲ್ಲ. ಒಂದೇ ಚೇರ್. ಅಲ್ಲೇ ಕೂರಬೇಕು. ಮಹಡಿ ಮೇಲೆ ಮಲಗಬೇಕು. ಇದು ಅವಿದ್ಯಾವಂತರ ಕಥೆಯಲ್ಲ. ವೈದ್ಯನೋರ್ವ ತನ್ನ ಪತ್ನಿಗೆ 4 ವರ್ಷದಿಂದ ಮಾಡಿರೋ ಉಪಚಾರ.


ಚಿಕ್ಕಮಗಳೂರು ನಗರದ ದೋಣಿಕಣ ನಿವಾಸಿಯಾದ 45 ವರ್ಷದ ವಿನುತಾರಾಣಿಯನ್ನ 22 ವರ್ಷದ ಹಿಂದೆ ಡಾ.ರವಿಕುಮಾರ್ ಜೊತೆ ಮದುವೆ ಮಾಡಿಕೊಟ್ಟಿದ್ರು. ಎಂ.ಬಿ.ಬಿ.ಎಸ್. ಓದುತ್ತಿರೋ ಮಗನೂ ಇದ್ದಾನೆ. ಆದ್ರೆ, ನಾಲ್ಕು ವರ್ಷದಿಂದ ಪತ್ನಿಗೆ ಮಾನಸಿಕ ಕಿರುಕುಳ ನೀಡ್ತಿರೋ ಪತಿಯಿಂದ ಈಕೆಗೆ ಗೃಹಬಂಧನಲ್ಲಿಟ್ಟಿದ್ದಾರೆ. ಮನೆಯ ಮೇಲಿನ ಮಹಡಿಯ ರೂಮಿನಲ್ಲೇ ಇರಬೇಕು. ಕೇಳಬರುವಂತಿಲ್ಲ. ಬಂದರೂ ಮನೆ ಕೆಲಸ ಮಾಡಿ ಮತ್ತೆ ಮೇಲೆ ಹೋಗಬೇಕು. ಕೂರೋಕೆ ಒಂದು ಚೇರ್ ಕೊಟ್ಟಿದ್ದಾರೆ ಅಷ್ಟೆ. ಊಟ ಅವರು ಹಾಕಿದಾಗ. ಹಾಕಿದಷ್ಟು ಅಷ್ಟೆ. ಗಂಡ ಹಾಗೂ ಅತ್ತೆ ಊರಿಗೆ ಹೋದರೆ ಈಕೆಗೆ ಅವರು ಬರುವಷ್ಟು ದಿನ ಗೃಹ ದಿಗ್ಭಂದನ. ಮನೆಯಿಂದ ಆಚೆ ಬರುವಂತಿಲ್ಲ. ಅವರು ಹೋಗುವಾಗ 20 ರೂಪಾಯಿ ಕೊಟ್ಟು ಹೋಗ್ತಾರೆ. ಅವರು ಬರುವಷ್ಟು ದಿನ ಮನೆಯಿಂದ ಹೊರಗೋಗದಂತೆ ಅದೇ 20 ರೂಪಾಯಿಯಲ್ಲಿ ಬದುಕಬೇಕು. ಎಕ್ಸ್ ಪಾರ್ಟ್ ಡೈವರ್ಸ್ ಕೊಟ್ಟಿದ್ದೇನೆ ಎಂದು 4 ವರ್ಷದಿಂದ ಅನ್ನ-ಆಹಾರ ನೀಡಿದೆ ಗೃಹಬಂಧನದಲ್ಲಿಟ್ಟಿದ್ದಾನೆ ಎಂದು ವೈದ್ಯನ ವಿರುದ್ಧ ಗೃಹಿಣಿ ಹಾಗೂ ಆಕೆಯ ಸಹೋದರ ಆರೋಪಿಸಿದ್ದಾರೆ.
ಮನೆಯಲ್ಲೇ ದಿಗ್ಭಂಧನ ಹಾಕಿರೋ ಡಾಕ್ಟ್ರು ಈಕೆಗೆ ಮೊಬೈಲ್ ಕೊಟ್ಟಿದ್ದಾರೆ. ಯೂಟ್ಯೂಬ್ ನೋಡೋದು ಬಿಟ್ಟು ಬೇರೇನೂ ಮಾಡಲು ಆಗಲ್ಲ. ದಿನಕ್ಕೆ ಒಂದು ಅಥವಾ ಎರಡು ಹೊತ್ತು ಊಟ ಕೊಡ್ತಾರೆ. ಅದು ಅವರು ಕೊಟ್ಟಷ್ಟು ಮಾತ್ರ ತಿನ್ನಬೇಕು. ಜಾಸ್ತಿ ಕೇಳಿದರೆ ಹೊಡೆಯೋದು, ತಲೆಯನ್ನ ಗೋಡೆಗೆ ಗುದ್ದೋದು, ಎದೆಗೆ ಕಾಲಲ್ಲಿ ಓದೆಯೋದು ಮಾಡ್ತಾರಂತೆ. ಕುತ್ತಿಗೆ ಹಿಸುಕಿ ಸಾಯಿ-ಸಾಯಿ ಎಂದು ಡಾಕ್ಟ್ರು ಹಾಗೂ ಆತನ ಅಮ್ಮ ಹೊಡೆಯುತ್ತಾರಂತೆ. ಊಟದಲ್ಲಿ ಸ್ಲೋ ಪಾಯಿಜನ್ ಹಾಕಿ ಮಾನಸಿಕವಾಗಿ ಕುಗ್ಗುವಂತೆ ಮಾಡಿದ್ದಾರೆ ಎಂದು ವಿನೂತರಾಣಿ ಸಹೋದರ ವಾಗೀಶ್ ಆರೋಪಿಸಿದ್ದಾರೆ. ಎಂ.ಬಿ.ಬಿ.ಎಸ್. ಓದುತ್ತಿರೋ ಮಗನಿದ್ದು ಆತನಿಗೂ ತಾಯಿಯ ಬಳಿ ಬಿಡೋದಿಲ್ಲ. ಆತ ಕೂಡ ಅಮ್ಮನಿಗೆ ನೀನು ಇನ್ನೂ ಸತ್ತಿಲ್ವಾ, ಯಾವಾಗ ಸಾಯ್ತೀಯಾ. ಅಪ್ಪ ನನಗೆ ಓದಿಸುತ್ತೆ. ಅಪ್ಪ ಹೇಳಿದ ಹಾಗೆ ಮಾಡು. ಅಪ್ಪ ಕೊಡೋ ಊಟ ತಿನ್ನು ಅಂತಾನಂತೆ. ನಾಲ್ಕು ವರ್ಷದಿಂದ ಅನ್ನ-ಆಹಾರವಿಲ್ಲದೆ ಗೃಹಬಂಧನದಲ್ಲಿ ನರಳಾಡಿದ ಗೃಹಿಣಿ ಪಕ್ಕದ ಮನೆಯವರಿಂದ ಫೋಟೋ ತೆಗೆಸಿ ತಮ್ಮನಿಗೆ ಕಳಿಸಿ ಇದೀಗ ಆಸ್ಪತ್ರೆ ಸೇರಿದ್ದಾರೆ. ಆಕೆಯ ತಮ್ಮ ವಾಗೀಶ್ ಪೊಲೀಸರನ್ನ ಕರೆದುಕೊಂಡು ಹೋಗಿ ಅಕ್ಕನನ್ನ ಆಸ್ಪತ್ರೆ ಸೇರಿಸಿ ಅಕ್ಕನ ಸ್ಥಿತಿ ನೀಡಿ ಕಣ್ಣೀರಿಡ್ತಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು