9:38 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಬೆಳಗಾವಿ ಅಂತಾರಾಷ್ಟ್ರೀಯ ಸಾವಯವ ಮೇಳದಲ್ಲಿ ಸಿಎಂ ಸಿದ್ದರಾಮಯ್ಯ

13/12/2024, 18:23

ಬೆಳಗಾವಿ (reporterkarnataka.com): ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿರಿಧಾನ್ಯದಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದರು.
ದೇಶದಲ್ಲಿ ಕರ್ನಾಟಕ ರಾಜ್ಯ ಸಿರಿಧಾನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ ಎಂದು ತಿಳಿಸಿದರು.
ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದ್ದು, ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಸಿರಿಧಾನ್ಯವನ್ನು
ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ ಎಂದರು.


ಬೆಂಗಳೂರಿನ ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳವನ್ನು ಡಿಸೆಂಬರ್ 23, 24 ಮತ್ತು 25 ರಂದು ಹಮ್ಮಿಕೊಳ್ಳಲಾಗಿದ್ದು, ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಡಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು