12:42 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬರೇ ಕೇಂದ್ರದ ಅನುದಾನದಿಂದ ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಅಭಿವೃದ್ಧಿ ಅಸಾಧ್ಯ: ಸರಕಾರದ ಗಮನ ಸೆಳೆದ ಶಾಸಕ ಕಾಮತ್

13/12/2024, 19:52

ಬೆಳಗಾವಿ(reporterkarnataka.com):ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಗೊಳಿಸಲಾದ ಅನುದಾನದ ಬಗ್ಗೆ ಪ್ರಶ್ನಿಸಿ, ಕೇವಲ ಕೇಂದ್ರ ಸರ್ಕಾರದ ಅನುದಾನದಿಂದಲೇ ಮಹಾನಗರ ಪಾಲಿಕೆಯ 60 ವಾರ್ಡುಗಳನ್ನೂ ಅಭಿವೃದ್ಧಿಗೊಳಿಸಲು ಅಸಾಧ್ಯ, ರಾಜ್ಯ ಸರ್ಕಾರವೂ ವಿಶೇಷ ಅನುದಾನಗಳನ್ನು ನೀಡುವ ಬಗ್ಗೆ ಕ್ರಮವಹಿಸಬೇಕು ಎಂದು ಶಾಸಕರು ಆಗ್ರಹಿಸಿದರು.
ಕಳೆದ ಅವಧಿಯಲ್ಲಿ ಕೆಯುಡಿಎಫ್ ಸಿ ವತಿಯಿಂದ ಕ್ಷೇತ್ರದಲ್ಲಿ ಆರಂಭಗೊಂಡಿದ್ದ ಕಾಮಗಾರಿಗಳಿಂದಾಗಿ ಹಲವೆಡೆ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಮುಗಿದ ನಂತರ ಮರು ರಸ್ತೆ ನಿರ್ಮಾಣಕ್ಕೆಂದೇ ಈ ಹಿಂದೆ ಮೀಸಲಿರಿಸಲಾಗಿದ್ದ ಸುಮಾರು 72 ಕೋಟಿ ಅನುದಾನವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಿದ್ದೇ ಇಂದು ಇಲ್ಲಿನ ಹೊಂಡಗಳನ್ನೂ ಸಹ ಮುಚ್ಚಲಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಮೂಲ ಕಾರಣ, ಹಾಗಾಗಿ ಇದನ್ನು ಸಚಿವರು ಆದ್ಯತೆಯ ಮೇರೆಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಒಂದೂವರೆ ವರ್ಷ ಕಳೆದರೂ ಅಮೃತ್ ಯೋಜನೆಗಳು ಇನ್ನೂ ಸಹ ಟೆಂಡರ್ ಹಂತದಲ್ಲಿಯೇ ಇರುವ ಬಗ್ಗೆ, ಬಹು ಬೇಡಿಕೆಯ ಜಲಸಿರಿ ಯೋಜನೆ ಸ್ಥಗಿತಗೊಂಡಿರುವ ಬಗ್ಗೆ, ಪ್ರಕೃತಿ ವಿಕೋಪದಿಂದಾಗಿ ನಗರದ ಅಲ್ಲಲ್ಲಿ ರಸ್ತೆ ಸಹಿತ ಅನೇಕ ರೀತಿಯ ಹಾನಿಯ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರಕದ ಬಗ್ಗೆ ಹಾಗೂ ಈ ಹಿಂದಿನ ಅವಧಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 125 ಕೋಟಿಯ ಯೋಜನೆಯನ್ನು ಪ್ರಸ್ತುತ ರಾಜ್ಯ ಸರ್ಕಾರವು ಸ್ಥಗಿತಗೊಳಿಸಿದ್ದು ಅದನ್ನು ಪುನರ್ ಆರಂಭಿಸುವ ಬಗ್ಗೆ ಶಾಸಕರು ಸರ್ಕಾರದ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು