2:28 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬರೇ ಕೇಂದ್ರದ ಅನುದಾನದಿಂದ ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಅಭಿವೃದ್ಧಿ ಅಸಾಧ್ಯ: ಸರಕಾರದ ಗಮನ ಸೆಳೆದ ಶಾಸಕ ಕಾಮತ್

13/12/2024, 19:52

ಬೆಳಗಾವಿ(reporterkarnataka.com):ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಗೊಳಿಸಲಾದ ಅನುದಾನದ ಬಗ್ಗೆ ಪ್ರಶ್ನಿಸಿ, ಕೇವಲ ಕೇಂದ್ರ ಸರ್ಕಾರದ ಅನುದಾನದಿಂದಲೇ ಮಹಾನಗರ ಪಾಲಿಕೆಯ 60 ವಾರ್ಡುಗಳನ್ನೂ ಅಭಿವೃದ್ಧಿಗೊಳಿಸಲು ಅಸಾಧ್ಯ, ರಾಜ್ಯ ಸರ್ಕಾರವೂ ವಿಶೇಷ ಅನುದಾನಗಳನ್ನು ನೀಡುವ ಬಗ್ಗೆ ಕ್ರಮವಹಿಸಬೇಕು ಎಂದು ಶಾಸಕರು ಆಗ್ರಹಿಸಿದರು.
ಕಳೆದ ಅವಧಿಯಲ್ಲಿ ಕೆಯುಡಿಎಫ್ ಸಿ ವತಿಯಿಂದ ಕ್ಷೇತ್ರದಲ್ಲಿ ಆರಂಭಗೊಂಡಿದ್ದ ಕಾಮಗಾರಿಗಳಿಂದಾಗಿ ಹಲವೆಡೆ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಮುಗಿದ ನಂತರ ಮರು ರಸ್ತೆ ನಿರ್ಮಾಣಕ್ಕೆಂದೇ ಈ ಹಿಂದೆ ಮೀಸಲಿರಿಸಲಾಗಿದ್ದ ಸುಮಾರು 72 ಕೋಟಿ ಅನುದಾನವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಿದ್ದೇ ಇಂದು ಇಲ್ಲಿನ ಹೊಂಡಗಳನ್ನೂ ಸಹ ಮುಚ್ಚಲಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಮೂಲ ಕಾರಣ, ಹಾಗಾಗಿ ಇದನ್ನು ಸಚಿವರು ಆದ್ಯತೆಯ ಮೇರೆಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಒಂದೂವರೆ ವರ್ಷ ಕಳೆದರೂ ಅಮೃತ್ ಯೋಜನೆಗಳು ಇನ್ನೂ ಸಹ ಟೆಂಡರ್ ಹಂತದಲ್ಲಿಯೇ ಇರುವ ಬಗ್ಗೆ, ಬಹು ಬೇಡಿಕೆಯ ಜಲಸಿರಿ ಯೋಜನೆ ಸ್ಥಗಿತಗೊಂಡಿರುವ ಬಗ್ಗೆ, ಪ್ರಕೃತಿ ವಿಕೋಪದಿಂದಾಗಿ ನಗರದ ಅಲ್ಲಲ್ಲಿ ರಸ್ತೆ ಸಹಿತ ಅನೇಕ ರೀತಿಯ ಹಾನಿಯ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರಕದ ಬಗ್ಗೆ ಹಾಗೂ ಈ ಹಿಂದಿನ ಅವಧಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 125 ಕೋಟಿಯ ಯೋಜನೆಯನ್ನು ಪ್ರಸ್ತುತ ರಾಜ್ಯ ಸರ್ಕಾರವು ಸ್ಥಗಿತಗೊಳಿಸಿದ್ದು ಅದನ್ನು ಪುನರ್ ಆರಂಭಿಸುವ ಬಗ್ಗೆ ಶಾಸಕರು ಸರ್ಕಾರದ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು