12:41 PM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಬರೇ ಕೇಂದ್ರದ ಅನುದಾನದಿಂದ ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಅಭಿವೃದ್ಧಿ ಅಸಾಧ್ಯ: ಸರಕಾರದ ಗಮನ ಸೆಳೆದ ಶಾಸಕ ಕಾಮತ್

13/12/2024, 19:52

ಬೆಳಗಾವಿ(reporterkarnataka.com):ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಗೊಳಿಸಲಾದ ಅನುದಾನದ ಬಗ್ಗೆ ಪ್ರಶ್ನಿಸಿ, ಕೇವಲ ಕೇಂದ್ರ ಸರ್ಕಾರದ ಅನುದಾನದಿಂದಲೇ ಮಹಾನಗರ ಪಾಲಿಕೆಯ 60 ವಾರ್ಡುಗಳನ್ನೂ ಅಭಿವೃದ್ಧಿಗೊಳಿಸಲು ಅಸಾಧ್ಯ, ರಾಜ್ಯ ಸರ್ಕಾರವೂ ವಿಶೇಷ ಅನುದಾನಗಳನ್ನು ನೀಡುವ ಬಗ್ಗೆ ಕ್ರಮವಹಿಸಬೇಕು ಎಂದು ಶಾಸಕರು ಆಗ್ರಹಿಸಿದರು.
ಕಳೆದ ಅವಧಿಯಲ್ಲಿ ಕೆಯುಡಿಎಫ್ ಸಿ ವತಿಯಿಂದ ಕ್ಷೇತ್ರದಲ್ಲಿ ಆರಂಭಗೊಂಡಿದ್ದ ಕಾಮಗಾರಿಗಳಿಂದಾಗಿ ಹಲವೆಡೆ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಮುಗಿದ ನಂತರ ಮರು ರಸ್ತೆ ನಿರ್ಮಾಣಕ್ಕೆಂದೇ ಈ ಹಿಂದೆ ಮೀಸಲಿರಿಸಲಾಗಿದ್ದ ಸುಮಾರು 72 ಕೋಟಿ ಅನುದಾನವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಿದ್ದೇ ಇಂದು ಇಲ್ಲಿನ ಹೊಂಡಗಳನ್ನೂ ಸಹ ಮುಚ್ಚಲಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಮೂಲ ಕಾರಣ, ಹಾಗಾಗಿ ಇದನ್ನು ಸಚಿವರು ಆದ್ಯತೆಯ ಮೇರೆಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಒಂದೂವರೆ ವರ್ಷ ಕಳೆದರೂ ಅಮೃತ್ ಯೋಜನೆಗಳು ಇನ್ನೂ ಸಹ ಟೆಂಡರ್ ಹಂತದಲ್ಲಿಯೇ ಇರುವ ಬಗ್ಗೆ, ಬಹು ಬೇಡಿಕೆಯ ಜಲಸಿರಿ ಯೋಜನೆ ಸ್ಥಗಿತಗೊಂಡಿರುವ ಬಗ್ಗೆ, ಪ್ರಕೃತಿ ವಿಕೋಪದಿಂದಾಗಿ ನಗರದ ಅಲ್ಲಲ್ಲಿ ರಸ್ತೆ ಸಹಿತ ಅನೇಕ ರೀತಿಯ ಹಾನಿಯ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರಕದ ಬಗ್ಗೆ ಹಾಗೂ ಈ ಹಿಂದಿನ ಅವಧಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 125 ಕೋಟಿಯ ಯೋಜನೆಯನ್ನು ಪ್ರಸ್ತುತ ರಾಜ್ಯ ಸರ್ಕಾರವು ಸ್ಥಗಿತಗೊಳಿಸಿದ್ದು ಅದನ್ನು ಪುನರ್ ಆರಂಭಿಸುವ ಬಗ್ಗೆ ಶಾಸಕರು ಸರ್ಕಾರದ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು