11:46 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ – ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ: ಹಲವು ಬೇಡಿಕೆಗಳ ಚರ್ಚೆ

13/12/2024, 21:13

ಹೊಸದಿಲ್ಲಿ(reporterkarnataka.com): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ICAR-IIHR ಸಂಸ್ಥೆಯು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಕಾರಿಕಾ ವಲಯದಲ್ಲಿ ಅಧಿಕ ಇಳುವರಿ ನೀಡುವ ಬೆಳೆಗಳು, ಹೆಚ್ಚು ರೋಗ ನಿರೋಧಕ ಶಕ್ತಿ ಇರುವ ಬೆಳೆಗಳ ಸಂಶೋಧನೆ, ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮೂಲಕ ರೈತರ ಆರ್ಥಿಕ ಪ್ರಗತಿಗೆ ಸಹಕರಿಸುತ್ತಿದೆ.
ದೇಶದಲ್ಲಿ 2025 ರ ವೇಳೆಗೆ ಸುಮಾರು 1.5 ಲಕ್ಷ ತೋಟಗಾರಿಕಾ ಪದವಿಧರರು ಅವಶ್ಯಕತೆಯಿದ್ದು, ಪ್ರಸ್ತುತ 57 ತೋಟಗಾರಿಕಾ ಕಾಲೇಜುಗಳಲ್ಲಿ 10 ಸಾವಿರಕ್ಕೂ ಕಡಿಮೆ ಪದವಿಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗೆ, ಮಾರಾಟಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ICAR-IIHR ಅನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಹಾಗೂ ಈಗಾಗಲೇ ಸಂಸದರು ಪತ್ರದ ಮುಖೇನ ಮನವಿ ಸಲ್ಲಿಸಿದ್ದ ರಾಮನಗರ ಜಿಲ್ಲೆಯಾದ್ಯಂತ ಮಾವು ಹಾಗೂ ತೆಂಗು ಬೆಳೆ ಶೇಕಡಾ 90 ರಷ್ಟು ಹಾನಿಯಾಗಿದ್ದು 50,000ಕ್ಕೂ ಅಧಿಕ ರೈತರು ನಷ್ಟ ಅನುಭವಿಸಿದ್ದಾರೆ. ಮಾವು ಬೆಳೆಗೆ 57.67 ಕೋಟಿ ಹಾಗೂ ತೆಂಗು ಬೆಳೆಗೆ 30.65 ಕೋಟಿ ನೆರವನ್ನು NDRF ಅಡಿಯಲ್ಲಿ ಕಲ್ಪಿಸುವ ಮೂಲಕ ನಮ್ಮ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವರಿಗೆ
ಡಾ.ಸಿ ಎನ್ ಮಂಜುನಾಥ್ ಅವರು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು