2:26 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ – ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ: ಹಲವು ಬೇಡಿಕೆಗಳ ಚರ್ಚೆ

13/12/2024, 21:13

ಹೊಸದಿಲ್ಲಿ(reporterkarnataka.com): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ICAR-IIHR ಸಂಸ್ಥೆಯು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಕಾರಿಕಾ ವಲಯದಲ್ಲಿ ಅಧಿಕ ಇಳುವರಿ ನೀಡುವ ಬೆಳೆಗಳು, ಹೆಚ್ಚು ರೋಗ ನಿರೋಧಕ ಶಕ್ತಿ ಇರುವ ಬೆಳೆಗಳ ಸಂಶೋಧನೆ, ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮೂಲಕ ರೈತರ ಆರ್ಥಿಕ ಪ್ರಗತಿಗೆ ಸಹಕರಿಸುತ್ತಿದೆ.
ದೇಶದಲ್ಲಿ 2025 ರ ವೇಳೆಗೆ ಸುಮಾರು 1.5 ಲಕ್ಷ ತೋಟಗಾರಿಕಾ ಪದವಿಧರರು ಅವಶ್ಯಕತೆಯಿದ್ದು, ಪ್ರಸ್ತುತ 57 ತೋಟಗಾರಿಕಾ ಕಾಲೇಜುಗಳಲ್ಲಿ 10 ಸಾವಿರಕ್ಕೂ ಕಡಿಮೆ ಪದವಿಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗೆ, ಮಾರಾಟಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ICAR-IIHR ಅನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಹಾಗೂ ಈಗಾಗಲೇ ಸಂಸದರು ಪತ್ರದ ಮುಖೇನ ಮನವಿ ಸಲ್ಲಿಸಿದ್ದ ರಾಮನಗರ ಜಿಲ್ಲೆಯಾದ್ಯಂತ ಮಾವು ಹಾಗೂ ತೆಂಗು ಬೆಳೆ ಶೇಕಡಾ 90 ರಷ್ಟು ಹಾನಿಯಾಗಿದ್ದು 50,000ಕ್ಕೂ ಅಧಿಕ ರೈತರು ನಷ್ಟ ಅನುಭವಿಸಿದ್ದಾರೆ. ಮಾವು ಬೆಳೆಗೆ 57.67 ಕೋಟಿ ಹಾಗೂ ತೆಂಗು ಬೆಳೆಗೆ 30.65 ಕೋಟಿ ನೆರವನ್ನು NDRF ಅಡಿಯಲ್ಲಿ ಕಲ್ಪಿಸುವ ಮೂಲಕ ನಮ್ಮ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವರಿಗೆ
ಡಾ.ಸಿ ಎನ್ ಮಂಜುನಾಥ್ ಅವರು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು