3:45 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ – ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ: ಹಲವು ಬೇಡಿಕೆಗಳ ಚರ್ಚೆ

13/12/2024, 21:13

ಹೊಸದಿಲ್ಲಿ(reporterkarnataka.com): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ICAR-IIHR ಸಂಸ್ಥೆಯು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಕಾರಿಕಾ ವಲಯದಲ್ಲಿ ಅಧಿಕ ಇಳುವರಿ ನೀಡುವ ಬೆಳೆಗಳು, ಹೆಚ್ಚು ರೋಗ ನಿರೋಧಕ ಶಕ್ತಿ ಇರುವ ಬೆಳೆಗಳ ಸಂಶೋಧನೆ, ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮೂಲಕ ರೈತರ ಆರ್ಥಿಕ ಪ್ರಗತಿಗೆ ಸಹಕರಿಸುತ್ತಿದೆ.
ದೇಶದಲ್ಲಿ 2025 ರ ವೇಳೆಗೆ ಸುಮಾರು 1.5 ಲಕ್ಷ ತೋಟಗಾರಿಕಾ ಪದವಿಧರರು ಅವಶ್ಯಕತೆಯಿದ್ದು, ಪ್ರಸ್ತುತ 57 ತೋಟಗಾರಿಕಾ ಕಾಲೇಜುಗಳಲ್ಲಿ 10 ಸಾವಿರಕ್ಕೂ ಕಡಿಮೆ ಪದವಿಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗೆ, ಮಾರಾಟಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ICAR-IIHR ಅನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಹಾಗೂ ಈಗಾಗಲೇ ಸಂಸದರು ಪತ್ರದ ಮುಖೇನ ಮನವಿ ಸಲ್ಲಿಸಿದ್ದ ರಾಮನಗರ ಜಿಲ್ಲೆಯಾದ್ಯಂತ ಮಾವು ಹಾಗೂ ತೆಂಗು ಬೆಳೆ ಶೇಕಡಾ 90 ರಷ್ಟು ಹಾನಿಯಾಗಿದ್ದು 50,000ಕ್ಕೂ ಅಧಿಕ ರೈತರು ನಷ್ಟ ಅನುಭವಿಸಿದ್ದಾರೆ. ಮಾವು ಬೆಳೆಗೆ 57.67 ಕೋಟಿ ಹಾಗೂ ತೆಂಗು ಬೆಳೆಗೆ 30.65 ಕೋಟಿ ನೆರವನ್ನು NDRF ಅಡಿಯಲ್ಲಿ ಕಲ್ಪಿಸುವ ಮೂಲಕ ನಮ್ಮ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವರಿಗೆ
ಡಾ.ಸಿ ಎನ್ ಮಂಜುನಾಥ್ ಅವರು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು