6:36 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ – ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ: ಹಲವು ಬೇಡಿಕೆಗಳ ಚರ್ಚೆ

13/12/2024, 21:13

ಹೊಸದಿಲ್ಲಿ(reporterkarnataka.com): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ICAR-IIHR ಸಂಸ್ಥೆಯು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಕಾರಿಕಾ ವಲಯದಲ್ಲಿ ಅಧಿಕ ಇಳುವರಿ ನೀಡುವ ಬೆಳೆಗಳು, ಹೆಚ್ಚು ರೋಗ ನಿರೋಧಕ ಶಕ್ತಿ ಇರುವ ಬೆಳೆಗಳ ಸಂಶೋಧನೆ, ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮೂಲಕ ರೈತರ ಆರ್ಥಿಕ ಪ್ರಗತಿಗೆ ಸಹಕರಿಸುತ್ತಿದೆ.
ದೇಶದಲ್ಲಿ 2025 ರ ವೇಳೆಗೆ ಸುಮಾರು 1.5 ಲಕ್ಷ ತೋಟಗಾರಿಕಾ ಪದವಿಧರರು ಅವಶ್ಯಕತೆಯಿದ್ದು, ಪ್ರಸ್ತುತ 57 ತೋಟಗಾರಿಕಾ ಕಾಲೇಜುಗಳಲ್ಲಿ 10 ಸಾವಿರಕ್ಕೂ ಕಡಿಮೆ ಪದವಿಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗೆ, ಮಾರಾಟಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ICAR-IIHR ಅನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಹಾಗೂ ಈಗಾಗಲೇ ಸಂಸದರು ಪತ್ರದ ಮುಖೇನ ಮನವಿ ಸಲ್ಲಿಸಿದ್ದ ರಾಮನಗರ ಜಿಲ್ಲೆಯಾದ್ಯಂತ ಮಾವು ಹಾಗೂ ತೆಂಗು ಬೆಳೆ ಶೇಕಡಾ 90 ರಷ್ಟು ಹಾನಿಯಾಗಿದ್ದು 50,000ಕ್ಕೂ ಅಧಿಕ ರೈತರು ನಷ್ಟ ಅನುಭವಿಸಿದ್ದಾರೆ. ಮಾವು ಬೆಳೆಗೆ 57.67 ಕೋಟಿ ಹಾಗೂ ತೆಂಗು ಬೆಳೆಗೆ 30.65 ಕೋಟಿ ನೆರವನ್ನು NDRF ಅಡಿಯಲ್ಲಿ ಕಲ್ಪಿಸುವ ಮೂಲಕ ನಮ್ಮ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವರಿಗೆ
ಡಾ.ಸಿ ಎನ್ ಮಂಜುನಾಥ್ ಅವರು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು