2:05 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕ ಭಾಗದಲ್ಲಿ 432 ನವೋದ್ಯಮಗಳ ನೋಂದಣಿ: ಸಚಿವ ಪ್ರಿಯಾಂಕ್ ಖರ್ಗೆ

13/12/2024, 21:27

ಬೆಳಗಾವಿ (reporterkarnataka.com): ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮ ಉದ್ದಿಮೆಗಳು ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ನಡೆದ ವಿಶೇಷ ಚರ್ಚೆ ಸಂದರ್ಭದಲ್ಲಿ ಉತ್ತರಿಸಿದರು.
ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆ , ಹೊಸ ಆವಿಷ್ಕಾರಗಳನ್ನು ಮಾಡುವ ನಿಟ್ಟಿನಲ್ಲಿ 432 ನವೋದ್ಯಮ ಉದ್ದಿಮೆಗಳ ಆರಂಭಕ್ಕೆ ನೋಂದಣಿ ಮಾಡಿಕೊಂಡಿದ್ದು ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಯಾಗಲಿದ್ದು, ನಿಪುಣ ಕರ್ನಾಟಕ ಯೋಜನೆಯಡಿ ಕೂಡಾ ಈ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದೆ ಎಂದರು.
ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಹಲವು ಐತಿಹಾಸಿಕ ಪ್ರಸಿದ್ಧ ದೇವಾಲಯಗಳಿದ್ದು ಇಲ್ಲಿ ಟೆಂಪಲ್ ಟೂರಿಸಮ್ ಅಭಿವೃದ್ಧಿ ಪಡಿಸಬಹುದು ಅಲ್ಲದೆ ಹೆಚ್ಚಿನ ಸಂಖ್ಯೆಯ ಅಣೆಕಟ್ಟುಗಳಿದ್ದು ಅವುಗಳ ಹಿನ್ನೀರಿನಲ್ಲಿ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಬಹುದಾಗಿದೆ. ಕರಡಿಧಾಮ, ಪಕ್ಷಿಧಾಮ ಗಳಿದ್ದು , ರೋಪ್ ವೇ ಮೂಲಕ ಆಕರ್ಷಿಸಬಹುದಾದ ಸ್ಥಳಗಳಿದ್ದು,ರಸ್ತೆ, ರೈಲು ಮಾತ್ತು ವಾಯು ಮಾರ್ಗದ ವ್ಯವಸ್ಥೆಯಿದ್ದು ಇವೆಲ್ಲವುಗಳನ್ನು ಬಳಸಿಕೊಂಡು ಈ ಭಾಗವನ್ನು ಅಭಿವೃದ್ಧಿಗೊಳಿಸಬೇಕು ಎಂದರು.
ಸದಸ್ಯ ಎಂ. ನಾಗರಾಜ್ ಮಾತನಾಡಿ, ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆ ಗಳ ಸ್ಥಾಪನೆ ಆಗಬೇಕು, ನೀರಾವರಿ ಸಮಸ್ಯೆಗಳ ಬಗ್ಗೆ ಕೇಂದ್ರದ ಮೇಲೆ ಒತ್ತಡ ತಂದು ಬಗೆಹರಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಸದಸ್ಯರಾದ ಡಿ.ಟಿ.ಶ್ರೀನಿವಾಸ್ , ಪ್ರತಾಪ್ ಸಿಂಹ ನಾಯಕ್ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು