11:08 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಜತೆ ಚರ್ಚೆ: ವಿಧಾನ ಪರಿಷತ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

13/12/2024, 22:50

ಬೆಳಗಾವಿ(reporterkarnataka.com): ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ.ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದರು.
ಗ್ರಾಮ ಪಂಚಾಯತ್ ಸದಸ್ಯ ರಿಗೆ ಪಿಂಚಣಿ,ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿರುತ್ತದೆ.
ಅಧಿಕಾರಿ/ ಕೆಲವು ಸಿಬ್ಬಂದಿಗಳ ಸೇವಾ ವಿಷಯ/ ಬೇಡಿಕೆಗಳನ್ನು ಪರಿಶೀಲಿಸಲು ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸದರಿ ಸಮಿತಿಗೆ ಪರಿಶೀಲಿಸಿ ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು