8:32 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಕದ್ರಿಪಾರ್ಕ್‌ನಲ್ಲಿ ನಾಳೆ ಮತ್ತೆ ಬೃಹತ್ ವೈನ್ ಮೇಳ: ಹೊಸ ಹೊಸ ಪಾನೀಯಗಳ ಪ್ರದರ್ಶನ

14/12/2024, 00:26

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್‌ನಲ್ಲಿ ಕಳೆದ ವಾರ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆಯಲ್ಲಿ ಡಿ.15ರಂದು ಮತ್ತೆ ಮೇಳ ಆಯೋಜಿಸಲಾಗಿದೆ.
ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಬೆಳಗ್ಗೆ 10.30ರಿಂದ ರಾತ್ರಿ 9.30 ಗಂಟೆ ತನಕ ವೈನ್ ಮೇಳ ನಡೆಯಲಿದೆ.
ದ್ರಾಕ್ಷಾ ರಸದ ಉಪಯೋಗಗಳು, ಸವಿಯುವ ಕ್ರಮ ಮುಂತಾದ ಸೂಕ್ತ ಮಾಹಿತಿಗಳೊಂದಿಗೆ ಬ್ರಾೃಂಡುಗಳ ಪ್ರದರ್ಶನ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಉತ್ಪನ್ನಗಳು, ಎಲ್ಲಾ ಕಂಪನಿಗಳ ಹೊಸ ಹೊಸ ಪಾನೀಯಗಳನ್ನು ಪ್ರದರ್ಶಿಸಿ ಪರಿಚಯಿಸುವ ಹಾಗೂ ದ್ರಾಕ್ಷಾ ರಸದ (ವೈನ್ ) ರುಚಿಯನ್ನು ಸವಿದು ಬೇಕಾದ ರೀತಿಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ದ್ರಾಕ್ಷಾ ರಸ ಉತ್ಪಾದಕ ಸಂಸ್ಥೆಗಳ ಮೂಲಕ ಅತ್ಯಾಕರ್ಷಕ ದರ ಹಾಗೂ ಅತ್ಯುತ್ತಮ ಕೊಡುಗೆಗಳೊಂದಿಗೆ ಮೇಳ ಏರ್ಪಡಿಸಲಾಗಿದೆ.
ಮೇಳದಲ್ಲಿ ಟ್ರಾೃಕ್ ಮ್ಯೂಸಿಕ್ ಏರ್ಪಡಿಸಲಾಗಿದೆ. ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕುಟುಂಬ ಸಮೇತರಾಗಿ ಬಂದು ರಜಾ ದಿನವನ್ನು ಇಲ್ಲಿ ಕಳೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಆಗಮಿಸಿ ಇದರ ಸದುಪಯೋಗ ಪಡೆಯಬೇಕು ಎಂದು ಸಂಘಟಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು