11:42 AM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಕದ್ರಿಪಾರ್ಕ್‌ನಲ್ಲಿ ನಾಳೆ ಮತ್ತೆ ಬೃಹತ್ ವೈನ್ ಮೇಳ: ಹೊಸ ಹೊಸ ಪಾನೀಯಗಳ ಪ್ರದರ್ಶನ

14/12/2024, 00:26

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್‌ನಲ್ಲಿ ಕಳೆದ ವಾರ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆಯಲ್ಲಿ ಡಿ.15ರಂದು ಮತ್ತೆ ಮೇಳ ಆಯೋಜಿಸಲಾಗಿದೆ.
ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಬೆಳಗ್ಗೆ 10.30ರಿಂದ ರಾತ್ರಿ 9.30 ಗಂಟೆ ತನಕ ವೈನ್ ಮೇಳ ನಡೆಯಲಿದೆ.
ದ್ರಾಕ್ಷಾ ರಸದ ಉಪಯೋಗಗಳು, ಸವಿಯುವ ಕ್ರಮ ಮುಂತಾದ ಸೂಕ್ತ ಮಾಹಿತಿಗಳೊಂದಿಗೆ ಬ್ರಾೃಂಡುಗಳ ಪ್ರದರ್ಶನ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಉತ್ಪನ್ನಗಳು, ಎಲ್ಲಾ ಕಂಪನಿಗಳ ಹೊಸ ಹೊಸ ಪಾನೀಯಗಳನ್ನು ಪ್ರದರ್ಶಿಸಿ ಪರಿಚಯಿಸುವ ಹಾಗೂ ದ್ರಾಕ್ಷಾ ರಸದ (ವೈನ್ ) ರುಚಿಯನ್ನು ಸವಿದು ಬೇಕಾದ ರೀತಿಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ದ್ರಾಕ್ಷಾ ರಸ ಉತ್ಪಾದಕ ಸಂಸ್ಥೆಗಳ ಮೂಲಕ ಅತ್ಯಾಕರ್ಷಕ ದರ ಹಾಗೂ ಅತ್ಯುತ್ತಮ ಕೊಡುಗೆಗಳೊಂದಿಗೆ ಮೇಳ ಏರ್ಪಡಿಸಲಾಗಿದೆ.
ಮೇಳದಲ್ಲಿ ಟ್ರಾೃಕ್ ಮ್ಯೂಸಿಕ್ ಏರ್ಪಡಿಸಲಾಗಿದೆ. ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕುಟುಂಬ ಸಮೇತರಾಗಿ ಬಂದು ರಜಾ ದಿನವನ್ನು ಇಲ್ಲಿ ಕಳೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಆಗಮಿಸಿ ಇದರ ಸದುಪಯೋಗ ಪಡೆಯಬೇಕು ಎಂದು ಸಂಘಟಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು