2:42 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಅದ್ದೂರಿ ಕಪಿಲಾ ಆರತಿ: ಸ್ನಾನ ಘಟ್ಟದಲ್ಲಿ ಲಕ್ಷ ದೀಪೋತ್ಸವ

14/12/2024, 13:42

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಕಪಿಲಾ ನದಿ ಸ್ನಾನಘಟ್ಟದ ಬಳಿ ಶುಕ್ರವಾರ ರಾತ್ರಿ ಕಪಿಲ ಆರತಿ ಕಾರ್ಯಕ್ರಮ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು.


ನಂಜನಗೂಡು ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 8ನೇ ವರ್ಷದ ಕಪಿಲ ಆರತಿ ಕಾರ್ಯಕ್ರಮ ಇದಾಗಿದೆ.
ಉತ್ತರ ಭಾರತದ ಗಂಗಾ ನದಿಯಲ್ಲಿ ಆಚರಿಸುವ ಗಂಗಾರತಿ ಮಾದರಿಯಲ್ಲಿ ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿಯಲ್ಲಿ ಆಯೋಜಿಸಲಾಗಿದ್ದ ಕಪಿಲಾರತಿ ಕಾರ್ಯಕ್ರಮ ಆಗಿದೆ. ಕಾರ್ಯಕ್ರಮದ ಅಂಗವಾಗಿ ಜೊಂಡು ಹಾಗೂ ತ್ಯಾಜ್ಯಗಳಿಂದ ಕೂಡಿದ್ದ ಕಪಿಲಾ ನದಿ ಸ್ನಾನಘಟ್ಟ ಹಾಗೂ ಹದಿನಾರು ಕಾಲು ಮಂಟಪದ ಬಳಿ ಸ್ವಚ್ಛಗೊಳಿಸಿ ವಿದ್ಯುತ್ ದೀಪಗಳಿಂದ ಅಲಂಕರಿಸಿ ಇಡೀ ನದಿಯ ದಡ ಜಗ ಮಗಿಸುವಂತಿತ್ತು .
ನದಿ ಮಧ್ಯ ಭಾಗದಲ್ಲಿ ಕಪಿಲ ಆರತಿಗಾಗಿ ಭವ್ಯವೇದಿಕೆಯನ್ನು ನಿರ್ಮಾಣ ಮಾಡಿ ಕನ್ನಡ ಮಾತೆ ಭುವನೇಶ್ವರಿ ಪುತ್ಥಳಿ ಪ್ರತಿಷ್ಠಾಪಿಸಿ ಇಡೀ ವೇದಿಕೆಯನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು .
ಭವ್ಯವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ದೀಪ ಹಾಗೂ ಜ್ಯೋತಿ ಹಚ್ಚುವ ಮೂಲಕ ಹರಿಹರ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿಗಳು ಹಾಗೂ ಸಾಲೂರು ಮಠದ ಡಾ. ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಮೂಡಗೂರು ವಿರಕ್ತಮಠದ ಶ್ರೀ ಇಮ್ಮಡಿ ಉದ್ದಾನ ಸ್ವಾಮಿಗಳು ಚಾಲನೆ ನೀಡಿದರು.
ಬಳಿಕ ವಿಪ್ರರ ವೇದ ಘೋಷದೊಂದಿಗೆ ಭಾರತ ದೇಶದ ಹಲವಾರು ಪುಣ್ಯ ನದಿಗಳ ಹೆಸರಿನಲ್ಲಿ ದೂಪ, ದೀಪ, ಆರತಿ ಕಾರ್ಯಕ್ರಮಗಳು ನಡೆದವು ನೆರೆದಿದ್ದ ಸಾವಿರಾರು ಭಕ್ತರು ಕಪಿಲಾರತಿಯ ದೃಶ್ಯವನ್ನು ಕಣ್ತುಂಬಿ ಕೊಂಡರು.
ಇದೇ ಮೊದಲ ಬಾರಿಗೆ ನಂಜನಗೂಡು ಹಾಗೂ ಕಪಿಲಾ ನದಿಯ ಇತಿಹಾಸ ಸಾರುವ ಲೇಸರ್ ಶೋ ನಡೆಸಲಾಯಿತು. ಅಲ್ಲದೆ ಭಕ್ತಿ ಗೀತೆ ಸೇರಿದಂತೆ ಕಪಿಲಾ ನದಿ ಸ್ನಾನ ಘಟ್ಟದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಸಾವಿರಾರು ಭಕ್ತರು ದೀಪಗಳನ್ನು ಹಚ್ಚುವ ಮೂಲಕ ಕಪಿಲಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.ದಿವ್ಯ ಸಾನಿಧ್ಯ ವಹಿಸಿದ್ದ ಹರಿಹರ ಮಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿಗಳು ಆಶೀರ್ವಚನ ನೀಡಿ ಕಾರ್ಯಕ್ರಮ ಆಯೋಜನೆ ಮಾಡಿದ ಯುವ ಬ್ರಿಗೇಡ್ ಸಂಘಟನೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸ್ಥಳ ಪುರೋಹಿತರಾದ ಕೃಷ್ಣ ಜೋಯಿಸ್ ಯುವ ಬ್ರಿಗೇಡ್ ಮುಖಂಡರುಗಳಾದ ಚಂದ್ರಶೇಖರ್, ಸುನಿಲ್, ಕಿಶೋರ್, ಚಂದನ್, ಶ್ರೀನಿವಾಸ್, ನಿತಿನ್, ಗಿರೀಶ್, ರವಿ ಶಾಸ್ತ್ರಿ, ಮಹದೇವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು