7:25 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಅದ್ದೂರಿ ಕಪಿಲಾ ಆರತಿ: ಸ್ನಾನ ಘಟ್ಟದಲ್ಲಿ ಲಕ್ಷ ದೀಪೋತ್ಸವ

14/12/2024, 13:42

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಕಪಿಲಾ ನದಿ ಸ್ನಾನಘಟ್ಟದ ಬಳಿ ಶುಕ್ರವಾರ ರಾತ್ರಿ ಕಪಿಲ ಆರತಿ ಕಾರ್ಯಕ್ರಮ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು.


ನಂಜನಗೂಡು ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 8ನೇ ವರ್ಷದ ಕಪಿಲ ಆರತಿ ಕಾರ್ಯಕ್ರಮ ಇದಾಗಿದೆ.
ಉತ್ತರ ಭಾರತದ ಗಂಗಾ ನದಿಯಲ್ಲಿ ಆಚರಿಸುವ ಗಂಗಾರತಿ ಮಾದರಿಯಲ್ಲಿ ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿಯಲ್ಲಿ ಆಯೋಜಿಸಲಾಗಿದ್ದ ಕಪಿಲಾರತಿ ಕಾರ್ಯಕ್ರಮ ಆಗಿದೆ. ಕಾರ್ಯಕ್ರಮದ ಅಂಗವಾಗಿ ಜೊಂಡು ಹಾಗೂ ತ್ಯಾಜ್ಯಗಳಿಂದ ಕೂಡಿದ್ದ ಕಪಿಲಾ ನದಿ ಸ್ನಾನಘಟ್ಟ ಹಾಗೂ ಹದಿನಾರು ಕಾಲು ಮಂಟಪದ ಬಳಿ ಸ್ವಚ್ಛಗೊಳಿಸಿ ವಿದ್ಯುತ್ ದೀಪಗಳಿಂದ ಅಲಂಕರಿಸಿ ಇಡೀ ನದಿಯ ದಡ ಜಗ ಮಗಿಸುವಂತಿತ್ತು .
ನದಿ ಮಧ್ಯ ಭಾಗದಲ್ಲಿ ಕಪಿಲ ಆರತಿಗಾಗಿ ಭವ್ಯವೇದಿಕೆಯನ್ನು ನಿರ್ಮಾಣ ಮಾಡಿ ಕನ್ನಡ ಮಾತೆ ಭುವನೇಶ್ವರಿ ಪುತ್ಥಳಿ ಪ್ರತಿಷ್ಠಾಪಿಸಿ ಇಡೀ ವೇದಿಕೆಯನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು .
ಭವ್ಯವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ದೀಪ ಹಾಗೂ ಜ್ಯೋತಿ ಹಚ್ಚುವ ಮೂಲಕ ಹರಿಹರ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿಗಳು ಹಾಗೂ ಸಾಲೂರು ಮಠದ ಡಾ. ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಮೂಡಗೂರು ವಿರಕ್ತಮಠದ ಶ್ರೀ ಇಮ್ಮಡಿ ಉದ್ದಾನ ಸ್ವಾಮಿಗಳು ಚಾಲನೆ ನೀಡಿದರು.
ಬಳಿಕ ವಿಪ್ರರ ವೇದ ಘೋಷದೊಂದಿಗೆ ಭಾರತ ದೇಶದ ಹಲವಾರು ಪುಣ್ಯ ನದಿಗಳ ಹೆಸರಿನಲ್ಲಿ ದೂಪ, ದೀಪ, ಆರತಿ ಕಾರ್ಯಕ್ರಮಗಳು ನಡೆದವು ನೆರೆದಿದ್ದ ಸಾವಿರಾರು ಭಕ್ತರು ಕಪಿಲಾರತಿಯ ದೃಶ್ಯವನ್ನು ಕಣ್ತುಂಬಿ ಕೊಂಡರು.
ಇದೇ ಮೊದಲ ಬಾರಿಗೆ ನಂಜನಗೂಡು ಹಾಗೂ ಕಪಿಲಾ ನದಿಯ ಇತಿಹಾಸ ಸಾರುವ ಲೇಸರ್ ಶೋ ನಡೆಸಲಾಯಿತು. ಅಲ್ಲದೆ ಭಕ್ತಿ ಗೀತೆ ಸೇರಿದಂತೆ ಕಪಿಲಾ ನದಿ ಸ್ನಾನ ಘಟ್ಟದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಸಾವಿರಾರು ಭಕ್ತರು ದೀಪಗಳನ್ನು ಹಚ್ಚುವ ಮೂಲಕ ಕಪಿಲಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.ದಿವ್ಯ ಸಾನಿಧ್ಯ ವಹಿಸಿದ್ದ ಹರಿಹರ ಮಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿಗಳು ಆಶೀರ್ವಚನ ನೀಡಿ ಕಾರ್ಯಕ್ರಮ ಆಯೋಜನೆ ಮಾಡಿದ ಯುವ ಬ್ರಿಗೇಡ್ ಸಂಘಟನೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸ್ಥಳ ಪುರೋಹಿತರಾದ ಕೃಷ್ಣ ಜೋಯಿಸ್ ಯುವ ಬ್ರಿಗೇಡ್ ಮುಖಂಡರುಗಳಾದ ಚಂದ್ರಶೇಖರ್, ಸುನಿಲ್, ಕಿಶೋರ್, ಚಂದನ್, ಶ್ರೀನಿವಾಸ್, ನಿತಿನ್, ಗಿರೀಶ್, ರವಿ ಶಾಸ್ತ್ರಿ, ಮಹದೇವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು