7:58 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲ ಗೃಹ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

14/12/2024, 14:08

ಬೆಳಗಾವಿ(reporterkarnataka.com): ಆರ್ಥಿಕ ಇಲಾಖೆ ಅನುಮೋದನೆ ದೊರೆತ ನಂತರ ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಬೆಳೆ, ಪುಷ್ಪೋದ್ಯಮ, ಮೆಣಸಿನಕಾಯಿ ಆವಕ ಹೆಚ್ಚು ಇರುವ ಮಾರುಕಟ್ಟೆಗಳಲ್ಲಿ ಶೀತಲಗೃಹ ನಿರ್ಮಾಣ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ.
೨೦೨೪-೨೫ನೇ ಸಾಲಿನ ಆರ್‌ ಐಡಿಎಫ್‌ -೩೦ ಯೋಜನೆ ಅಡಿಯಲ್ಲಿ ೨೫೪.೫೦ ಕೋಟಿ ರೂ. ಅನುದಾನ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಕೋರಿಕೆ ಸಲ್ಲಿಸಲಾಗಿದ್ದು, ೧೪೪.೭೫ ಕೋಟಿ ರೂ. ವೆಚ್ಚದಲ್ಲಿ ಶೀತಲ ಗೃಹ ಮತ್ತಿತರ ಸೌಕರ್ಯ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು.
ಆದರೆ ಬಹುತೇಕ ಸಚಿವರು ಮತ್ತು ಶಾಸಕರಿಂದ ಶೀತಲಗೃಹ ನಿರ್ಮಾಣದ ಕೋರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ೩೫೪.೭೫ ಕೋಟಿ ರೂ. ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪುನಃ ಕೋರಿಕೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು