2:08 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲ ಗೃಹ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

14/12/2024, 14:08

ಬೆಳಗಾವಿ(reporterkarnataka.com): ಆರ್ಥಿಕ ಇಲಾಖೆ ಅನುಮೋದನೆ ದೊರೆತ ನಂತರ ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಬೆಳೆ, ಪುಷ್ಪೋದ್ಯಮ, ಮೆಣಸಿನಕಾಯಿ ಆವಕ ಹೆಚ್ಚು ಇರುವ ಮಾರುಕಟ್ಟೆಗಳಲ್ಲಿ ಶೀತಲಗೃಹ ನಿರ್ಮಾಣ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ.
೨೦೨೪-೨೫ನೇ ಸಾಲಿನ ಆರ್‌ ಐಡಿಎಫ್‌ -೩೦ ಯೋಜನೆ ಅಡಿಯಲ್ಲಿ ೨೫೪.೫೦ ಕೋಟಿ ರೂ. ಅನುದಾನ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಕೋರಿಕೆ ಸಲ್ಲಿಸಲಾಗಿದ್ದು, ೧೪೪.೭೫ ಕೋಟಿ ರೂ. ವೆಚ್ಚದಲ್ಲಿ ಶೀತಲ ಗೃಹ ಮತ್ತಿತರ ಸೌಕರ್ಯ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು.
ಆದರೆ ಬಹುತೇಕ ಸಚಿವರು ಮತ್ತು ಶಾಸಕರಿಂದ ಶೀತಲಗೃಹ ನಿರ್ಮಾಣದ ಕೋರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ೩೫೪.೭೫ ಕೋಟಿ ರೂ. ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪುನಃ ಕೋರಿಕೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು