11:04 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲ ಗೃಹ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

14/12/2024, 14:08

ಬೆಳಗಾವಿ(reporterkarnataka.com): ಆರ್ಥಿಕ ಇಲಾಖೆ ಅನುಮೋದನೆ ದೊರೆತ ನಂತರ ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಬೆಳೆ, ಪುಷ್ಪೋದ್ಯಮ, ಮೆಣಸಿನಕಾಯಿ ಆವಕ ಹೆಚ್ಚು ಇರುವ ಮಾರುಕಟ್ಟೆಗಳಲ್ಲಿ ಶೀತಲಗೃಹ ನಿರ್ಮಾಣ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ.
೨೦೨೪-೨೫ನೇ ಸಾಲಿನ ಆರ್‌ ಐಡಿಎಫ್‌ -೩೦ ಯೋಜನೆ ಅಡಿಯಲ್ಲಿ ೨೫೪.೫೦ ಕೋಟಿ ರೂ. ಅನುದಾನ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಕೋರಿಕೆ ಸಲ್ಲಿಸಲಾಗಿದ್ದು, ೧೪೪.೭೫ ಕೋಟಿ ರೂ. ವೆಚ್ಚದಲ್ಲಿ ಶೀತಲ ಗೃಹ ಮತ್ತಿತರ ಸೌಕರ್ಯ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು.
ಆದರೆ ಬಹುತೇಕ ಸಚಿವರು ಮತ್ತು ಶಾಸಕರಿಂದ ಶೀತಲಗೃಹ ನಿರ್ಮಾಣದ ಕೋರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ೩೫೪.೭೫ ಕೋಟಿ ರೂ. ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪುನಃ ಕೋರಿಕೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು