12:09 PM Wednesday13 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲ ಗೃಹ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

14/12/2024, 14:08

ಬೆಳಗಾವಿ(reporterkarnataka.com): ಆರ್ಥಿಕ ಇಲಾಖೆ ಅನುಮೋದನೆ ದೊರೆತ ನಂತರ ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಬೆಳೆ, ಪುಷ್ಪೋದ್ಯಮ, ಮೆಣಸಿನಕಾಯಿ ಆವಕ ಹೆಚ್ಚು ಇರುವ ಮಾರುಕಟ್ಟೆಗಳಲ್ಲಿ ಶೀತಲಗೃಹ ನಿರ್ಮಾಣ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ.
೨೦೨೪-೨೫ನೇ ಸಾಲಿನ ಆರ್‌ ಐಡಿಎಫ್‌ -೩೦ ಯೋಜನೆ ಅಡಿಯಲ್ಲಿ ೨೫೪.೫೦ ಕೋಟಿ ರೂ. ಅನುದಾನ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಕೋರಿಕೆ ಸಲ್ಲಿಸಲಾಗಿದ್ದು, ೧೪೪.೭೫ ಕೋಟಿ ರೂ. ವೆಚ್ಚದಲ್ಲಿ ಶೀತಲ ಗೃಹ ಮತ್ತಿತರ ಸೌಕರ್ಯ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು.
ಆದರೆ ಬಹುತೇಕ ಸಚಿವರು ಮತ್ತು ಶಾಸಕರಿಂದ ಶೀತಲಗೃಹ ನಿರ್ಮಾಣದ ಕೋರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ೩೫೪.೭೫ ಕೋಟಿ ರೂ. ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪುನಃ ಕೋರಿಕೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು