6:21 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 9 ದಿನಗಳ ದತ್ತಜಯಂತಿ ಉತ್ಸವಕ್ಕೆ ತೆರೆ: ದತ್ತ ಹೋಮ ಸಂಪನ್ನ

15/12/2024, 18:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿವಾದಿತ ದತ್ತಪೀಠದಲ್ಲಿ ದತ್ತಪಾದುಕೆ, ದತ್ತ ಹೋಮದೊಂದಿಗೆ ಸಂಪನ್ನಗೊಳ್ಳುವ ಮೂಲಕ ದತ್ತಜಯಂತಿ ಉತ್ಸವಕ್ಕೆ ಇಂದು ತೆರೆ ಬಿದ್ದಿದೆ.


ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ದತ್ತಭಕ್ತರು ದತ್ತಪೀಠಕ್ಕೆ ಆಗಮಿಸಿದ್ದಾರೆ‌ ಕಳೆದ 9 ದಿನಗಳಿಂದ ದತ್ತಜಯಂತಿ ಅಂಗವಾಗಿ ದತ್ತಮಾಲಾಧಾರಣೆ ಮಾಡಿರುವ ಭಕ್ತರು ನಾನಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇರುಮುಡಿ ರೂಪದಲ್ಲಿ ಅಕ್ಕಿ,ಬೆಲ್ಲ,ಕಾಯಿಯನ್ನು ಭಕ್ತರು ಅರ್ಪಣೆ ಮಾಡಿದ್ದಾರೆ. ಭಕ್ತರು ದತ್ತಪೀಠದ ಗುಹೆ ಒಳಗೆ ದತ್ತಪಾದುಕೆ ದರ್ಶನ ಪಡೆದಿದ್ದಾರೆ. ಗುಹೆ ಸಮೀಪವೇ ಇಂದು ಹೋಮ ಹವನ ನಡೆಯಿತು. ಗಣ, ದತ್ತ ಹೋಮಯೊಂದಿಗೆ ದತ್ತಜಯಂತಿ ಉತ್ಸವಕ್ಕೆ ತೆರೆ ಬಿದ್ದಿದೆ.
ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ‌. ದತ್ತಪೀಠದಲ್ಲಿ ಮಂಜು,ಚಳಿ,ತುಂತುರು ಮಳೆಯಾಗಿದೆ.
ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಸುನೀಲ್ ಕುಮಾರ್ ಸೇರಿದಂತೆ, ಮಾಜಿ ಶಾಸಕ ಡಿ.ಎನ್. ಜೀವರಾಜ್, ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವರ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು