12:11 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಸಂಕಷ್ಟಗಳ ನಿವಾರಣೆಗಾಗಿ ದೋಷ ಪರಿಹಾರ ಪೂಜೆ: ಸ್ವಾಮಿ ಪೂರ್ಣಾಮೃತಾನಂದ ಪುರಿ

15/12/2024, 18:47

ಮಂಗಳೂರು(reporterkarnataka.com): ಜನ್ಮಜಾತವಾಗಿ ಜಾತಕಗಳಲ್ಲಿ ಗ್ರಹಗಳ ಸ್ಥಾನಾಂತರದಿಂದ ಹಲವು ದೋಷಗಳು ಗೋಚರಿಸುತ್ತವೆ. ಇದರಿಂದಾಗಿ ಪ್ರಕೃತಿ ಸಹಜವಾದ ಸಂಕಷ್ಟಗಳು ಮತ್ತು ತೊಂದರೆಗಳು ಮನುಷ್ಯರನ್ನು ಬಾಧಿಸುತ್ತವೆ. ಅದಕ್ಕಾಗಿ ಕಾಲಕಾಲಕ್ಕೆ ದೋಷ ನಿವಾರಣಾ ಪೂಜೆಗಳನ್ನು ಮಾಡಿಸುವುದು ಸೂಕ್ತ ಎಂದು ಮಾತಾ ಅಮೃತಾನಂದಮಯಿ ಮಠದ ಹಿರಿಯ ಸ್ವಾಮೀಜಿಗಳಾದ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿ ಹೇಳಿದರು.


ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ‍ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ನೂತನವಾಗಿ ಆರಂಭಿಸಲಾದ ಶನಿ ದೋಷ ನಿವಾರಣಾ ಪೂಜೆಯನ್ನು ದೀಪ ಬೆಳಗಿಸಿ ಚಾಲನೆ ನೀಡಿ ಸ್ವಾಮೀಜಿ ಆಶೀರ್ವಚನವಿತ್ತರು.
ನವಗ್ರಹಗಳಲ್ಲಿ ಶನಿಗ್ರಹದ ಪ್ರಭಾವವು ಜೀವಿಗಳ ಮೇಲೆ ಅಧಿಕವಾಗಿದ್ದು ಆ ಗ್ರಹಗಳ ಪ್ರೀತ್ಯರ್ಥವಾಗಿ ಸಾಮೂಹಿಕ ಪೂಜೆ ಕೈಗೊಂಡಾಗ ಅದರ ಪ್ರಭಾವವು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.
ಮಂಗಳೂರಿನ ಶಾಖಾ ಮಠದ ಮುಖ್ಯಸ್ಥರಾದ ಪೂಜನೀಯ ಸ್ವಾಮಿನಿ ಮಂಗಳಾಮೃತ ಪ್ರಾಣ ಉಪಸ್ಥಿತರಿದ್ದರು.
ಸ್ವಾಮೀಜಿಯವರನ್ನು ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿಯ ವತಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಕರೆತರಲಾಯಿತು.
ಈ ಸಂದರ್ಭದಲ್ಲಿ ಡಾ. ಜೀವರಾಜ್ ಸೊರಕೆ, ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್, ಭೋಜರಾಜ್ ಕರ್ಕೇರ,ಶ್ರುತಿ ಸನತ್ ಹೆಗ್ಡೆ,ಶ್ರೀ ಮುರಳೀಧರ್ ಶೆಟ್ಟಿ,
ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೈ. ಎನ್. ಸಾಲ್ಯಾನ್,ಉಪಾಧ್ಯಕ್ಷರಾದ ಕೃಷ್ಣಶೆಟ್ಟಿ,ಸುಧಾಕರ ಭಟ್,ಸಂಘಟನಾ ಕಾರ್ಯದರ್ಶಿ ಯೋಗೀಶ್ ಸಾಲ್ಯಾನ್, ಕಾರ್ಯದರ್ಶಿ ಡಾ. ದೇವದಾಸ್ ಪುತ್ರನ್ , ರಾಮನಾಥ್ , ದೀಪಕ್ ಶೆಟ್ಟಿಗಾರ್, ಪ್ರಕಾಶ್ ಕರ್ಕೇರ ಮತ್ತು ವಿವಿಧ ಸೇವಾ ಸಮಿತಿಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಸಲಹೆಗಾರರಾದ ಡಾ.ವಸಂತಕುಮಾರ ಪೆರ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಡಿದರು.ಪ್ರತಿ ತಿಂಗಳ ಎರಡನೆಯ ಶನಿವಾರ ಸಂಜೆ ಈ ದೋಷ ನಿವಾರಣೆ ಪೂಜೆ ಮುಂದುವರಿಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು