6:41 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಸಂಕಷ್ಟಗಳ ನಿವಾರಣೆಗಾಗಿ ದೋಷ ಪರಿಹಾರ ಪೂಜೆ: ಸ್ವಾಮಿ ಪೂರ್ಣಾಮೃತಾನಂದ ಪುರಿ

15/12/2024, 18:47

ಮಂಗಳೂರು(reporterkarnataka.com): ಜನ್ಮಜಾತವಾಗಿ ಜಾತಕಗಳಲ್ಲಿ ಗ್ರಹಗಳ ಸ್ಥಾನಾಂತರದಿಂದ ಹಲವು ದೋಷಗಳು ಗೋಚರಿಸುತ್ತವೆ. ಇದರಿಂದಾಗಿ ಪ್ರಕೃತಿ ಸಹಜವಾದ ಸಂಕಷ್ಟಗಳು ಮತ್ತು ತೊಂದರೆಗಳು ಮನುಷ್ಯರನ್ನು ಬಾಧಿಸುತ್ತವೆ. ಅದಕ್ಕಾಗಿ ಕಾಲಕಾಲಕ್ಕೆ ದೋಷ ನಿವಾರಣಾ ಪೂಜೆಗಳನ್ನು ಮಾಡಿಸುವುದು ಸೂಕ್ತ ಎಂದು ಮಾತಾ ಅಮೃತಾನಂದಮಯಿ ಮಠದ ಹಿರಿಯ ಸ್ವಾಮೀಜಿಗಳಾದ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿ ಹೇಳಿದರು.


ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ‍ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ನೂತನವಾಗಿ ಆರಂಭಿಸಲಾದ ಶನಿ ದೋಷ ನಿವಾರಣಾ ಪೂಜೆಯನ್ನು ದೀಪ ಬೆಳಗಿಸಿ ಚಾಲನೆ ನೀಡಿ ಸ್ವಾಮೀಜಿ ಆಶೀರ್ವಚನವಿತ್ತರು.
ನವಗ್ರಹಗಳಲ್ಲಿ ಶನಿಗ್ರಹದ ಪ್ರಭಾವವು ಜೀವಿಗಳ ಮೇಲೆ ಅಧಿಕವಾಗಿದ್ದು ಆ ಗ್ರಹಗಳ ಪ್ರೀತ್ಯರ್ಥವಾಗಿ ಸಾಮೂಹಿಕ ಪೂಜೆ ಕೈಗೊಂಡಾಗ ಅದರ ಪ್ರಭಾವವು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.
ಮಂಗಳೂರಿನ ಶಾಖಾ ಮಠದ ಮುಖ್ಯಸ್ಥರಾದ ಪೂಜನೀಯ ಸ್ವಾಮಿನಿ ಮಂಗಳಾಮೃತ ಪ್ರಾಣ ಉಪಸ್ಥಿತರಿದ್ದರು.
ಸ್ವಾಮೀಜಿಯವರನ್ನು ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿಯ ವತಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಕರೆತರಲಾಯಿತು.
ಈ ಸಂದರ್ಭದಲ್ಲಿ ಡಾ. ಜೀವರಾಜ್ ಸೊರಕೆ, ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್, ಭೋಜರಾಜ್ ಕರ್ಕೇರ,ಶ್ರುತಿ ಸನತ್ ಹೆಗ್ಡೆ,ಶ್ರೀ ಮುರಳೀಧರ್ ಶೆಟ್ಟಿ,
ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೈ. ಎನ್. ಸಾಲ್ಯಾನ್,ಉಪಾಧ್ಯಕ್ಷರಾದ ಕೃಷ್ಣಶೆಟ್ಟಿ,ಸುಧಾಕರ ಭಟ್,ಸಂಘಟನಾ ಕಾರ್ಯದರ್ಶಿ ಯೋಗೀಶ್ ಸಾಲ್ಯಾನ್, ಕಾರ್ಯದರ್ಶಿ ಡಾ. ದೇವದಾಸ್ ಪುತ್ರನ್ , ರಾಮನಾಥ್ , ದೀಪಕ್ ಶೆಟ್ಟಿಗಾರ್, ಪ್ರಕಾಶ್ ಕರ್ಕೇರ ಮತ್ತು ವಿವಿಧ ಸೇವಾ ಸಮಿತಿಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಸಲಹೆಗಾರರಾದ ಡಾ.ವಸಂತಕುಮಾರ ಪೆರ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಡಿದರು.ಪ್ರತಿ ತಿಂಗಳ ಎರಡನೆಯ ಶನಿವಾರ ಸಂಜೆ ಈ ದೋಷ ನಿವಾರಣೆ ಪೂಜೆ ಮುಂದುವರಿಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು