9:21 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಸಂಕಷ್ಟಗಳ ನಿವಾರಣೆಗಾಗಿ ದೋಷ ಪರಿಹಾರ ಪೂಜೆ: ಸ್ವಾಮಿ ಪೂರ್ಣಾಮೃತಾನಂದ ಪುರಿ

15/12/2024, 18:47

ಮಂಗಳೂರು(reporterkarnataka.com): ಜನ್ಮಜಾತವಾಗಿ ಜಾತಕಗಳಲ್ಲಿ ಗ್ರಹಗಳ ಸ್ಥಾನಾಂತರದಿಂದ ಹಲವು ದೋಷಗಳು ಗೋಚರಿಸುತ್ತವೆ. ಇದರಿಂದಾಗಿ ಪ್ರಕೃತಿ ಸಹಜವಾದ ಸಂಕಷ್ಟಗಳು ಮತ್ತು ತೊಂದರೆಗಳು ಮನುಷ್ಯರನ್ನು ಬಾಧಿಸುತ್ತವೆ. ಅದಕ್ಕಾಗಿ ಕಾಲಕಾಲಕ್ಕೆ ದೋಷ ನಿವಾರಣಾ ಪೂಜೆಗಳನ್ನು ಮಾಡಿಸುವುದು ಸೂಕ್ತ ಎಂದು ಮಾತಾ ಅಮೃತಾನಂದಮಯಿ ಮಠದ ಹಿರಿಯ ಸ್ವಾಮೀಜಿಗಳಾದ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿ ಹೇಳಿದರು.


ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ‍ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ನೂತನವಾಗಿ ಆರಂಭಿಸಲಾದ ಶನಿ ದೋಷ ನಿವಾರಣಾ ಪೂಜೆಯನ್ನು ದೀಪ ಬೆಳಗಿಸಿ ಚಾಲನೆ ನೀಡಿ ಸ್ವಾಮೀಜಿ ಆಶೀರ್ವಚನವಿತ್ತರು.
ನವಗ್ರಹಗಳಲ್ಲಿ ಶನಿಗ್ರಹದ ಪ್ರಭಾವವು ಜೀವಿಗಳ ಮೇಲೆ ಅಧಿಕವಾಗಿದ್ದು ಆ ಗ್ರಹಗಳ ಪ್ರೀತ್ಯರ್ಥವಾಗಿ ಸಾಮೂಹಿಕ ಪೂಜೆ ಕೈಗೊಂಡಾಗ ಅದರ ಪ್ರಭಾವವು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.
ಮಂಗಳೂರಿನ ಶಾಖಾ ಮಠದ ಮುಖ್ಯಸ್ಥರಾದ ಪೂಜನೀಯ ಸ್ವಾಮಿನಿ ಮಂಗಳಾಮೃತ ಪ್ರಾಣ ಉಪಸ್ಥಿತರಿದ್ದರು.
ಸ್ವಾಮೀಜಿಯವರನ್ನು ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿಯ ವತಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಕರೆತರಲಾಯಿತು.
ಈ ಸಂದರ್ಭದಲ್ಲಿ ಡಾ. ಜೀವರಾಜ್ ಸೊರಕೆ, ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್, ಭೋಜರಾಜ್ ಕರ್ಕೇರ,ಶ್ರುತಿ ಸನತ್ ಹೆಗ್ಡೆ,ಶ್ರೀ ಮುರಳೀಧರ್ ಶೆಟ್ಟಿ,
ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೈ. ಎನ್. ಸಾಲ್ಯಾನ್,ಉಪಾಧ್ಯಕ್ಷರಾದ ಕೃಷ್ಣಶೆಟ್ಟಿ,ಸುಧಾಕರ ಭಟ್,ಸಂಘಟನಾ ಕಾರ್ಯದರ್ಶಿ ಯೋಗೀಶ್ ಸಾಲ್ಯಾನ್, ಕಾರ್ಯದರ್ಶಿ ಡಾ. ದೇವದಾಸ್ ಪುತ್ರನ್ , ರಾಮನಾಥ್ , ದೀಪಕ್ ಶೆಟ್ಟಿಗಾರ್, ಪ್ರಕಾಶ್ ಕರ್ಕೇರ ಮತ್ತು ವಿವಿಧ ಸೇವಾ ಸಮಿತಿಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಸಲಹೆಗಾರರಾದ ಡಾ.ವಸಂತಕುಮಾರ ಪೆರ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಡಿದರು.ಪ್ರತಿ ತಿಂಗಳ ಎರಡನೆಯ ಶನಿವಾರ ಸಂಜೆ ಈ ದೋಷ ನಿವಾರಣೆ ಪೂಜೆ ಮುಂದುವರಿಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು