4:29 PM Monday24 - November 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

16/12/2024, 12:33

ಬೆಳಗಾವಿ(reporterkarnataka.com): ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನ ಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ. ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿಗಳು ಮಾಧ್ಯಮದವರನ್ನು ಪ್ರಶ್ನಿಸಿದರು.
*ಯಾರು ಇತ್ಯರ್ಥ ಮಾಡಿಲ್ಲವೋ ಅವರು ಕ್ಷಮೆ ಕೇಳಲಿ* ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ವನ್ನು ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು