3:23 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ ಕೊರೊನಾಗೆ ಬಲಿ

21/05/2021, 15:41

ನವದೆಹಲಿ(reporterkarnataka news):

ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ(94) ಕೊರೊನಾ ಸೋಂಕಿಗೆ ಶುಕ್ರವಾರ

ಬಲಿಯಾಗಿದ್ದಾರೆ.

ಸುಂದರ್ ಲಾಲ್ ಬಹುಗುಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಬಹುಗುಣ ಅವರು ಮರ, ಅರಣ್ಯ ನಾಶವನ್ನು ತಡೆಯುವ ನಿಟ್ಟಿನಲ್ಲಿ ಚಿಪ್ಕೊ ಚಳುವಳಿ ( ಮರವನ್ನು ಅಪ್ಪಿಕೊ ಚಳುವಳಿ) ಆರಂಭಿಸಿದ್ದರು. ಇದು ದೇಶಾದ್ಯಂತ ಪ್ರಸಿದ್ಧಿ ಪಡೆದಿತ್ತು.

ಅರಣ್ಯನಾಶ, ಬೃಹತ್ ಅಣೆಕಟ್ಟುಗಳು, ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ್ದ ಅವರು ಪರಿಸರ ಸಂರಕ್ಷಣೆ ಮಹತ್ವ ಸಾರಿದ್ದರು. 2009ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಸುಂದರ್ ಲಾಲ್ ನ್ಯುಮೋನಿಯಾ ಹಾಗೂ ಡಯಾಬಿಟಿಸ್

ಕಾಯಿಲೆಯಿಂದಲೂ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು