2:52 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ ಕೊರೊನಾಗೆ ಬಲಿ

21/05/2021, 15:41

ನವದೆಹಲಿ(reporterkarnataka news):

ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ(94) ಕೊರೊನಾ ಸೋಂಕಿಗೆ ಶುಕ್ರವಾರ

ಬಲಿಯಾಗಿದ್ದಾರೆ.

ಸುಂದರ್ ಲಾಲ್ ಬಹುಗುಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಬಹುಗುಣ ಅವರು ಮರ, ಅರಣ್ಯ ನಾಶವನ್ನು ತಡೆಯುವ ನಿಟ್ಟಿನಲ್ಲಿ ಚಿಪ್ಕೊ ಚಳುವಳಿ ( ಮರವನ್ನು ಅಪ್ಪಿಕೊ ಚಳುವಳಿ) ಆರಂಭಿಸಿದ್ದರು. ಇದು ದೇಶಾದ್ಯಂತ ಪ್ರಸಿದ್ಧಿ ಪಡೆದಿತ್ತು.

ಅರಣ್ಯನಾಶ, ಬೃಹತ್ ಅಣೆಕಟ್ಟುಗಳು, ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ್ದ ಅವರು ಪರಿಸರ ಸಂರಕ್ಷಣೆ ಮಹತ್ವ ಸಾರಿದ್ದರು. 2009ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಸುಂದರ್ ಲಾಲ್ ನ್ಯುಮೋನಿಯಾ ಹಾಗೂ ಡಯಾಬಿಟಿಸ್

ಕಾಯಿಲೆಯಿಂದಲೂ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು