1:40 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್, ಮಾಜಿ ಶಾಸಕ ನರಸಿಂಹಸ್ವಾಮಿ ನಿಧನಕ್ಕೆ ವಿಧಾನ ಸಭೆಯಲ್ಲಿ ಸಂತಾಪ

16/12/2024, 21:09

ಬೆಳಗಾವಿಸುವರ್ಣಸೌಧ (reporterkarnataka.com): ಭಾನುವಾರ ನಿಧನರಾದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನರಸಿಂಹಸ್ವಾಮಿ.ಜೆ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ಅವರಿಗೆ ಸೋಮವಾರ ವಿಧಾನ ಸಭೆಯ ಕಲಾಪದ ಆರಂಭದಲ್ಲಿ ಸಂತಾಪ ಸೂಚಿಸಲಾಯಿತು.
ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಮಾಜಿ ಶಾಸಕ ನರಸಿಂಹಸ್ವಾಮಿ.ಜೆ ಹಾಗೂ ತಬಲಾ ವಾದಕ ಜಾಕೀರ್ ಹುಸೇನ್ ನಿಧನದ ವಿಷಯವನ್ನು ಪ್ರಸ್ತಾಪಿಸಿ ಸಂತಾಪ ಸೂಚನೆ ನಿರ್ಣಯವನ್ನು ಮಂಡಿಸಿದರು.
ನರಸಿಂಹಸ್ವಾಮಿ ಜೆ. ಅವರು 25-05-1947 ರಂದು ಜನಿಸಿದ್ದರು. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ 2004 ಹಾಗೂ 2008ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಬೆಂಗಳೂರು ಜಿಲ್ಲಾ ಪಂಚಾಯತ್ ಸದಸ್ಯ, ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇವರು 15-12-2024 ರಂದು ನಿಧನ ಹೊಂದಿದ್ದಾರೆ.
ಅಂತರರಾಷ್ಟ್ರೀಯ ಖ್ಯಾತಿಯ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ 09-03-1951 ರಂದು ಮುಂಬೈನಲ್ಲಿ ಜನಿಸಿದ್ದರು. ಹಿಂದೂಸ್ಥಾನಿ, ಶಾಸ್ತ್ರೀಯ ಸಂಗೀತ ಮತ್ತು ಜಾಯ್ ಫ್ಯೂಷನ್ ಅಭ್ಯಾಸ ಮಾಡಿದ್ದರು. ತಬಲಾ ವಾದನದ ಜೊತೆಗೆ ಸಂಗೀತ ನಿರ್ದೇಶನ, ನಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇಂಗ್ಲೀಷ್ ಗಿಟಾರ್ ವಾದಕ ಜಾನ್ ಮೆಕ್ ಲಾಗ್ಸನ್, ಪಿಟೀಲು ವಾದಕ ಎಲ್.ಶಂಕರ್ ಮತ್ತು ತಾಳವಾದುಗಾರ ಟಿ.ಹೆಚ್.ವಿನಾಯಕರಾಮ್ ಅವರದೊಂದಿಗೆ 1973ರಲ್ಲಿ ನಡೆಸಿಕೊಟ್ಟ ವಿಶಿಷ್ಟ ಯೋಜನೆ ಸಂಗೀತ ಕ್ಷೇತ್ರದಲ್ಲಿ ಅಪ್ರತಿಮವೆನಿಸಿತ್ತು. ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. 5 ಗ್ರ್ಯಾಮಿ ಪ್ರಶಸ್ತಿಗಳನ್ನು ಪಡೆದ್ದರು. ಜಾಕೀರ್ ಹುಸೇನ್ 15-12-2024 ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಿಧರಾಗಿದ್ದಾರೆ ಎಂದು ಸದನಕ್ಕೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಿಳಿಸದರು.
ಉಪಮುಖ್ಯಮಂತ್ರಿಗಳು,ಜಲಸಂಪನ್ಮೂಲ ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಮಾತನಾಡಿ, ಮಾಜಿ ಶಾಸಕ ನರಸಿಂಹಸ್ವಾಮಿ ಜೆ. ಅವರ ತಂದೆ ಜಾಲಪ್ಪನವರು ಸಹ ರಾಜಕಾರಣಿಯಾಗಿದ್ದರು. ಒಮ್ಮೆ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು. ವೈಯಕ್ತಿಕವಾಗಿ ಅವರೊಂದಿಗೆ ಒಡನಾಟವಿತ್ತು. ಅವರ ನಿಧನದ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೇವರು ಕರುಣಿಸಲಿ ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಸಾವು ಬೆನ್ನ ಹಿಂದಿನ ನೆರಳಿನಂತೆ, ನಮ್ಮನು ಹಿಂಬಾಲಿಸುತ್ತಾ ಇರುತ್ತದೆ. ವಿಧಿಯ ನಿರ್ಣಯ ಬದಲಿಸಲು ಸಾಧ್ಯವಿಲ್ಲ. ನರಸಿಂಹಸ್ವಾಮಿ.ಜೆ ಬಿಜೆಪಿ ಪಕ್ಷದಿಂದಲೂ ಸ್ಪರ್ಧಿಸಿ ಗೆಲುವು ಕಂಡಿದ್ದರು. ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಇನ್ನಷ್ಟೂ ಕಾಲ ಬದುಕಿದ್ದರೆ ಸಂಗೀತಕ್ಕೆ ಹೆಚ್ಚಿನ ಕೊಡುಗೆ ನೀಡುತ್ತಿದ್ದರು ಎಂದು ಹೇಳಿದರು.
ಮೃತರ ಗೌರವಾರ್ಥ ವಿಧಾನ ಸಭೆಯಲ್ಲಿ ಒಂದು ನಿಮಿಷಗಳ ಕಾಲ ಮೌನಾಚರಣೆ ಆಚರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು