6:41 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವಕ್ಕೆ ಚಾಲನೆ

16/12/2024, 21:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ನೀಡಲಾಯಿತು.


ಡಿಸೆಂಬರ್ 16ರಿಂದ 26ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಬ್ರಹ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಶಬರಿಮಲೆ ಪ್ರಧಾನ ಅರ್ಚಕರಾದ ಶ್ರೀಕಂಠ ರಾಜೀವರು ತಂತ್ರಿಗಳ ಮಾರ್ಗದರ್ಶನದಲ್ಲಿ ಇಂದು ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಧ್ವಜಸ್ತಂಬಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧ್ವಜಾರೋಹಣ ಮಾಡಲಾಯಿತು.
ಇಂದು ಬೆಳಗ್ಗೆಯಿಂದಲೇ ಶ್ರೀ ಸ್ವಾಮಿ ಅಯ್ಯಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಅಶ್ವದ ಲಾಂಛನ ಹೊಂದಿರುವ ಧ್ವಜವನ್ನು ಅಯ್ಯಪ್ಪ ಭಕ್ತರ ಹರ್ಷೋದ್ಗಾರದೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.
ಬಳಿಕ ದೇವಾಲಯದ ಗುರುಸ್ವಾಮಿಗಳಾದ ಶ್ರೀ ದೇವರಾಜ ಸ್ವಾಮಿ ಮಾತನಾಡಿ 10 ದಿನಗಳ ಕಾಲ ನಡೆಯುವ ಬ್ರಹ್ಮೋತ್ಸವಕ್ಕೆ ಇಂದು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ನಾಳೆ 17ರಂದು ವಿಶೇಷ ಪಡಿ ಪೂಜೆ 20ರಂದು ಬೃಹತ್ ಅನ್ನ ಸಂತರ್ಪಣೆ ಹಾಗೂ ರಾಜಭೀದಿಗಳಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಮತ್ತು ತೆಪ್ಪೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಉಳಿದಂತೆ ಪ್ರತಿನಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಹಾಗಾಗಿ ಬ್ರಹ್ಮೋತ್ಸವದ ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭ ಪುರ ಪ್ರಮುಖರು ಅಯ್ಯಪ್ಪ ಸ್ವಾಮಿ ಭಕ್ತರುಗಳಾದ ಮಂಜುನಾಥ್, ಮೋಹನ್, ನಾರಾಯಣಪ್ಪ, ಡಾ., ರಾಘವೇಂದ್ರ, ಶ್ರೀಧರ್, ನಾಗರಾಜ್ , ವೆಂಕಟೇಶ್, ನಾರಾಯಣ ರೆಡ್ಡಿ, ಗಿರೀಶ್, ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು