7:45 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವಕ್ಕೆ ಚಾಲನೆ

16/12/2024, 21:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ನೀಡಲಾಯಿತು.


ಡಿಸೆಂಬರ್ 16ರಿಂದ 26ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಬ್ರಹ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಶಬರಿಮಲೆ ಪ್ರಧಾನ ಅರ್ಚಕರಾದ ಶ್ರೀಕಂಠ ರಾಜೀವರು ತಂತ್ರಿಗಳ ಮಾರ್ಗದರ್ಶನದಲ್ಲಿ ಇಂದು ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಧ್ವಜಸ್ತಂಬಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧ್ವಜಾರೋಹಣ ಮಾಡಲಾಯಿತು.
ಇಂದು ಬೆಳಗ್ಗೆಯಿಂದಲೇ ಶ್ರೀ ಸ್ವಾಮಿ ಅಯ್ಯಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಅಶ್ವದ ಲಾಂಛನ ಹೊಂದಿರುವ ಧ್ವಜವನ್ನು ಅಯ್ಯಪ್ಪ ಭಕ್ತರ ಹರ್ಷೋದ್ಗಾರದೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.
ಬಳಿಕ ದೇವಾಲಯದ ಗುರುಸ್ವಾಮಿಗಳಾದ ಶ್ರೀ ದೇವರಾಜ ಸ್ವಾಮಿ ಮಾತನಾಡಿ 10 ದಿನಗಳ ಕಾಲ ನಡೆಯುವ ಬ್ರಹ್ಮೋತ್ಸವಕ್ಕೆ ಇಂದು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ನಾಳೆ 17ರಂದು ವಿಶೇಷ ಪಡಿ ಪೂಜೆ 20ರಂದು ಬೃಹತ್ ಅನ್ನ ಸಂತರ್ಪಣೆ ಹಾಗೂ ರಾಜಭೀದಿಗಳಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಮತ್ತು ತೆಪ್ಪೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಉಳಿದಂತೆ ಪ್ರತಿನಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಹಾಗಾಗಿ ಬ್ರಹ್ಮೋತ್ಸವದ ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭ ಪುರ ಪ್ರಮುಖರು ಅಯ್ಯಪ್ಪ ಸ್ವಾಮಿ ಭಕ್ತರುಗಳಾದ ಮಂಜುನಾಥ್, ಮೋಹನ್, ನಾರಾಯಣಪ್ಪ, ಡಾ., ರಾಘವೇಂದ್ರ, ಶ್ರೀಧರ್, ನಾಗರಾಜ್ , ವೆಂಕಟೇಶ್, ನಾರಾಯಣ ರೆಡ್ಡಿ, ಗಿರೀಶ್, ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು