1:52 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ ನ್ಯಾಯಾಂಗ ತನಿಖೆಗೆ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

16/12/2024, 21:54

*ಸರ್ಕಾರ ಕ್ಷಮೆ ಕೇಳಿಲ್ಲ, ಮುಂದೆ ಇದರ ಪರಿಣಾಮ ಅನುಭವಿಸಬೇಕಾಗುತ್ತದೆ*

ಬೆಂಗಳೂರು(reporterkarnataka.com): ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರು ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಮಾರಣಾಂತಿಕವಾಗಿ ಹೊಡೆದಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಮುದಾಯದ ಜನರು ರೊಚ್ಚಿಗೆದ್ದು ರಾಜ್ಯಾದ್ಯಂತ ಹೋರಾಟ ನಡೆಸಿದ್ದಾರೆ. ಈ ಘಟನೆಯನ್ನು ವಿಧಾನಸಭೆಯಲ್ಲಿ ಖಂಡಿಸಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ಇದನ್ನು ನ್ಯಾಯಾಂಗ ತನಿಖೆಗೆ ವಹಿಸಿ, ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅನ್ನ ಕೊಡುವ ಪಂಚಮಸಾಲಿಗಳ ಮೇಲೆ ಕೈ ಮಾಡಿದ್ದಕ್ಕೆ ಸರ್ಕಾರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರೂ, ಕಾಂಗ್ರೆಸ್‌ ನಾಯಕರು ಅದಕ್ಕೆ ಸಮ್ಮತಿಸಿಲ್ಲ. ಲಾಠಿ ಚಾರ್ಜ್‌ ಮಾಡಿರುವುದು ಸರಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮ* ಎದುರಿಸಬೇಕಾಗುತ್ತದೆ. ಈ ವಿಚಾರದಲ್ಲಿ ಸದನದಲ್ಲಿ ಆರ್‌ಎಸ್‌ಎಸ್‌ ಹೆಸರು ತಂದಿರುವುದು ಅಕ್ಷಮ್ಯ. ಇದನ್ನು ಕಡತದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದ್ದೇವೆ ಎಂದರು.
ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಗೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಇಡೀ ವರ್ಷ ಚುನಾವಣೆ ನಡೆಯುತ್ತಲೇ ಇರುತ್ತದೆ. ನೀತಿ ಸಂಹಿತೆಯಿಂದಾಗಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುವುದಿಲ್ಲ. ಜೊತೆಗೆ ಜನರ ತೆರಿಗೆ ಹಣ ದುಂದುವೆಚ್ಚವಾಗುತ್ತಿದೆ. ಆದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂತಹ ಉತ್ತಮ ಮಸೂದೆಯನ್ನು ತಂದಿದೆ. ಇದನ್ನು ವಿರೋಧ ಮಾಡುವವರಿಗೆ ದೇಶ ಒಂದು ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಂತಹವರಿಗೆ ತೆರಿಗೆದಾರರ ಹಣದ ಬಗ್ಗೆ ಕಾಳಜಿ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು