6:23 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಒಳ ಮೀಸಲಾತಿ ಜಾರಿ; ನಮ್ಮ ಸರಕಾರವು ನುಡಿದಂತೆ ನಡೆಯಲಿದೆ: ಸಚಿವ ಡಾ.ಎಚ್. ಸಿ. ಮಹದೇವಪ್ಪ

16/12/2024, 22:06

ಬೆಳಗಾವಿ(reporterkarnataka.com):ಬೆಳಗಾವಿಯ ಸುವರ್ಣ ಸೌಧದ ಬಳಿ ಮಾದಿಗ ದಂಡೋರ ಸಮಿತಿಯಿಂದ ಜರುಗುತ್ತಿರುವ ಒಳ ಮೀಸಲಾತಿ ಜಾರಿ ಹೋರಾಟದ ಸಮಾವೇಶದಲ್ಲಿ ಪಾಲ್ಗೊಂಡು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದೆ.
ಇದೇ ವೇಳೆ ಪರಿಶಿಷ್ಟ ಸಮುದಾಯಗಳು ತಮ್ಮನ್ನು ಮಾದಿಗ ಮತ್ತು ಹೊಲೆಯ ಎಂದು ಕರೆದುಕೊಳ್ಳುವುದನ್ನು ನಿಲ್ಲಿಸಲು ವಿನಂತಿಸಿದೆ.
ಒಳ ಮೀಸಲಾತಿ ಜಾರಿಗೆ ನಮ್ಮ ಸಿದ್ದರಾಮಯ್ಯ ಸರ್ಕಾರವು ಬದ್ಧವಾಗಿದ್ದು ಈಗಾಗಲೇ ಅದನ್ನು ಸ್ಪಷ್ಟವಾಗಿ ಘೋಷಿಸಿದೆ. ಆದರೆ ಬಿಜೆಪಿ ಪಕ್ಷದ ನಾಯಕರು ಇದನ್ನು ರಾಜಕೀಯಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದು ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ಯಾವುದೇ ಪ್ರಯೋಜನ ಇಲ್ಲ.
ಜನರನ್ನು ಮೆಚ್ಚಿಸಲು ಹಳೆಯ ವರದಿ ಮತ್ತು 2011 ರ ಜನಗಣತಿಯ ದತ್ತಾಂಶ ತೆಗೆದುಕೊಂಡು ಮೀಸಲಾತಿ ಕೊಡಿ ಎಂದು ಸಲಹೆ ಕೊಡುತ್ತಿರುವ ಬಿಜೆಪಿಗರಿಗೆ 2011ರಿಂದ 2024ರ ಅವಧಿಯ ಒಳಗೆ ಪರಿಶಿಷ್ಟ ಸಮುದಾಯಗಳ ಜನಸಂಖ್ಯೆಯಲ್ಲಿ ಏರಿಕೆಯಾಗಿದ್ದರ ಕುರಿತು ಅರಿವಿಲ್ಲ. ಸರಿ ಸುಮಾರು ಒಂದೂವರೆ ದಶಕದ ಅವಧಿಯಲ್ಲಿ ಆಗಿರುವ ಮಾರ್ಪಾಡುಗಳನ್ನು ಸೇರಿಸಿಕೊಳ್ಳದೇ ಮೀಸಲಾತಿಯನ್ನು ಜಾರಿ ಮಾಡಿದರೆ ಮುಂದೊಮ್ಮೆ ಯಾರಾದರೂ ಪ್ರಶ್ನೆ ಮಾಡಿದರೆ ಆಗ ತೊಂದರೆ ಅನುಭವಿಸಬಾರದು ಎಂಬ ಉದ್ದೇಶದಿಂದಲೇ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವ ಡಾ.ಎಚ್. ಸಿ. ಮಹದೇವಪ್ಪ ನುಡಿದರು.


ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದಂತೆ ರಾಜಕೀಯ ಅಧಿಕಾರವೇ ಶೋಷಿತರ ಅಭಿವೃದ್ಧಿಯ ಕೀಲಿಕೈ ಎಂದು ಹೇಳಿದ್ದು ಅದನ್ನು ಎಲ್ಲರೂ ಗಮನದಲ್ಲಿಟ್ಟುಕೊಂಡು ವರ್ತಿಸಬೇಕು. ದೇಶಾದ್ಯಂತ ಅತಿ ಶೋಷಿತ ಸಮುದಾಯಗಳನ್ನು ಗುರುತಿಸಿ ಅವುಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಆಲೋಚಿಸಿದ್ದು ಈ ಬಗ್ಗೆ ಮುಂದಿನ ದಿನಗಳಲ್ಲಿ ಪಕ್ಷವು ವಿವರವಾಗಿ ಚರ್ಚಿಸಲಿದೆ.
ಒಳ ಮೀಸಲಾತಿಯನ್ನು ಸೂಕ್ತ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿದ್ದು ಚುನಾವಣಾ ಪ್ರಣಾಳಿಕೆಯಲ್ಲಿ ತಾನು ನುಡಿದಂತೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು