11:27 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

16/12/2024, 22:39

*80 ಸಾವಿರ ಪ್ರಕರಣಗಳಿಂದ 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮ*

ಬೆಳಗಾವಿ ಸುವರ್ಣಸೌಧ(reporterkarnataka.com):
ತೆರಿಗೆ ಪಾವತಿದಾರರು ಹಾಗೂ ತೆರಿಗೆ ಅಧಿಕಾರಿಗಳ ನಡುವಣ ಗೊಂದಲ ನಿವಾರಿಸಿ, ಒನ್‌ಟೈಮ್ ಸೆಟಲ್‌ಮೆಂಟ್ ಮಾಡುವ ಮೂಲಕ 80,000 ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ, ರಾಜ್ಯಕ್ಕೆ ಸುಮಾರು 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮಗೊಳಿಸುವ ನಿಟ್ಟಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ನಿಯಮಗಳಿಗೆ ಎರಡನೆ ತಿದ್ದುಪಡಿ ತರುವ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ಸೋಮವಾರ 2024 ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ (ಎರಡನೆ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ವ್ಯಾಪಾರ ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಸೇವೆಗಳ ತೆರಿಗೆ ವಿಧೇಯಕಕ್ಕೆ ತಿದ್ದುಪಡಿ ತರಲಾಗುತ್ತಿದೆ ಎಂದರು.
ತೆರಿಗೆ ಪಾವತಿದಾರರ ಹಾಗೂ ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವಿನ ಗೊಂದಲಕ್ಕೆ ತೆರೆ ಎಳೆಯುವ ಹಾಗೂ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಮತ್ತು ಸೇವೆಗಳ ತೆರಿಗೆ 2024 ವಿಧೇಯಕಕ್ಕೆ ಎರಡನೇ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು.
ವಿಧೇಯಕ ಮಂಡಿಸಿ ಮಾತನಾಡಿದ ಕೃಷ್ಣ ಭೈರೇಗೌಡ ಅವರು, ಎಲ್ಲೆಲ್ಲಿ ತೆರಿಗೆದಾರರ ಹಾಗೂ ತೆರಿಗೆ ಅಧಿಕಾರಿಗಳ ನಡುವೆ ಗೊಂದಲ ಇದೆ, ಈ ಗೊಂದಲಗಳಿಗೆ ತೆರೆ ಎಳೆಯುವ ಹಾಗೂ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು ಈ ತಿದ್ದುಪಡಿಯ ಪ್ರಮುಖ ಉದ್ದೇಶ. ಕಳೆದ ನಾಲ್ಕೈದು ವರ್ಷಗಳ ಅನುಭವದಲ್ಲಿ ಎಲ್ಲೆಲ್ಲಿ ಕಾನೂನುಗಳ ಅಗತ್ಯ ಇದೆ ಅದನ್ನು ಅನುಭವದ ಆಧಾರದಲ್ಲಿ ಗುರುತಿಸಲಾಗಿದೆ. ಹಾಗೂ ಕೆಲವು ವಿಚಾರಗಳನ್ನು ವ್ಯಾಖ್ಯಾನ ಮಾಡುವಾಗ ಒಂದಕ್ಕೊಂದು ತದ್ವಿರುದ್ಧವಾಗಿದ್ದ ವಿಚಾರಗಳನ್ನು ಸರಳೀಕರಣಗೊಳಿಸುವ ಕೆಲಸ ಈ ತಿದ್ದುಪಡಿಯಲ್ಲಿ ಮಾಡಲಾಗಿದೆ ಎಂದರು.
*ತಿದ್ದುಪಡಿಯಿಂದ ಖಜಾನೆಗೆ 15,000 ತೆರಿಗೆ ಸಂಗ್ರಹ:*
ಸರ್ಕಾರ ಹಾಗೂ ತೆರಿಗೆದಾರರ ನಡುವೆ 80,000 ಸಾವಿರ ವ್ಯಾಜ್ಯ ಪ್ರಕರಣಗಳು ವಿವಿಧ ಕಾರಣಗಳಿಗಾಗಿ ವಿಲೇವಾರಿಗೆ ಬಾಕಿ ಇರುವ ಕಾರಣದಿಂದ ರೂ.15,000 ಕೋಟಿ ತಕರಾರಿನಲ್ಲಿದೆ. ಈಗಿನ ತಿದ್ದುಪಡಿಯಿಂದ ಎಲ್ಲಾ ಪ್ರಕರಣಗಳೂ ಇತ್ಯರ್ಥವಾದರೆ ಖಜಾನೆಗೆ ರೂ.15,000 ಕೋಟಿ ಸಂಗ್ರಹವಾಗುವ ಸಾಧ್ಯತೆ ಇದೆ. ಅಧಿಕಾರಿಗಳ ಹಾಗೂ ತೆರಿಗೆ ಪಾವತಿದಾರರ ನಡುವೆ ಒಪ್ಪಂದ ಆಗದ ಕಾರಣ ಸುಮಾರು 80,000 ವ್ಯಾಜ್ಯ ಪ್ರಕರಣ ನ್ಯಾಯಾಲಯಗಳಲ್ಲಿವೆ. ಕಾನೂನು ಪ್ರಕ್ರಿಯೆಯಲ್ಲಿರುವ ಕಾರಣ ಬರುತ್ತಿರುವ ತೆರಿಗೆ ಸಹ ನಿಂತುಹೋಗಿದೆ ಎಂದರು.
“ಈ ಹಿಂದೆ ಮೌಲ್ಯ ವರ್ಧಿತ ತೆರಿಗೆ (ವ್ಯಾಟ್ ಪದ್ಧತಿ) ಜಾರಿಯಲ್ಲಿದ್ದ ಸಂದರ್ಭದಲ್ಲಿ ಅಂದಿನ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ವ್ಯಾಟ್ ಬಗೆಗಿನ ವ್ಯಾಜ್ಯಗಳ ಇತ್ಯರ್ಥಕ್ಕೆ ಒನ್ ಟೈಮ್ ಸೆಟಲ್ಮೆಂಟ್‌ಗೆ ಅವಕಾಶ ಕೊಟ್ಟಿದ್ದರು. ಪ್ರಸ್ತುತ ಇದೇ ಮಾದರಿಯನ್ನು ಮುಂದುವರೆಸಲು ನಿರ್ಧರಿಸಿ, 80,000 ಪ್ರಕರಣಗಳಿಗೆ ಒನ್‌ಟೈಮ್ ಸೆಟಲ್‌ಮೆಂಟ್ ಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಈಗಲೇ ವ್ಯಾಜ್ಯವನ್ನು ಇತ್ಯರ್ಥಪಡಿಸಿಕೊಂಡರೆ ಬಡ್ಡಿ ಹಾಗೂ ದಂಡ ಹೊರತುಪಡಿಸಿ ಮೂಲ ಹಣ ಪಾವತಿ ಮಾಡಿದರೆ ಸಾಕು. ಈ ಸೆಟಲ್‌ಮೆಂಟ್‌ಗೆ ಅವಕಾಶ ನೀಡಿದರೆ, ಹಲವರು ಇತ್ಯರ್ಥಕ್ಕೆ ಮುಂದೆ ಬರಬಹುದು. ಇದರಿಂದ ಸರ್ಕಾರದ ಖಜಾನೆಗೆ ಹಣ ಹರಿದುಬರಲಿದೆ ಎಂದರು.
ತೆರಿಗೆದಾರರು ಜಿಎಸ್‌ಟಿ ನ್ಯಾಯಾಧೀಕರಣದಲ್ಲಿ ಪ್ರಕರಣ ದಾಖಲಿಸುವಾಗ ಭದ್ರತಾ ಠೇವಣಿ ರೂಪದಲ್ಲಿ ರೂ.50 ಕೋಟಿ ಹಣ ಠೇವಣಿ ಇಡಬೇಕು. ತೆರಿಗೆದಾರರ ಪಾಲಿಗೆ ಇದು ದೊಡ್ಡ ಹೊರೆ. ಹೀಗಾಗಿ ಈ ಪ್ರಮಾಣವನ್ನು ರೂ.20 ಕೋಟಿಗೆ ಇಳಿಸಬೇಕು ಎಂದು ಹಲವು ವ್ಯವಹಾರಸ್ಥರು ಕೇಳಿಕೊಂಡಿದ್ದರು. ಅದರಂತೆ ಇದೀಗ ಭದ್ರತಾ ಠೇವಣಿ ಹಣವನ್ನು ರೂ.20 ಕೋಟಿ ರೂಪಾಯಿಗೆ ಉಳಿಸಲಾಗಿದೆ. ಇಲ್ಲದಿದ್ದರೆ, ತೆರಿಗೆದಾರರು ಸುಪ್ರೀಂ ಕೋರ್ಟ್ ಗೆ ಹೋಗ್ತಾರೆ. ಇದರಿಂದ ಸರ್ಕಾರಕ್ಕೂ ನಷ್ಟ, ತೆರಿಗೆದಾರರಿಗೂ ಕಷ್ಟ” ಎಂದು ವಿವರಿಸಿದ ಅವರು, ಈ ಕಾನೂನುಗಳನ್ನು ಸರಳೀಕರಿಸುವ ಸಂಬಂಧ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಬಹುತೇಕ ರಾಜ್ಯಗಳು ಒಪ್ಪಿಗೆ ಸೂಚಿಸಿವೆ. ಅ.1ರಿಂದಲೇ ಜಾರಿ ಮಾಡಲೂ ಸಹ ರಾಜ್ಯಗಳೂ ಸಮ್ಮತಿಸಿವೆ. ಕರ್ನಾಟಕದಲ್ಲಿ ಅದಕ್ಕೂ ಮೊದಲೇ ಜಾರಿಗೆ ತರಲಾಗಿದೆ. ಸಚಿವ ಸಂಪುಟದ ಅನುಮತಿ ಪಡೆದು ರಾಜ್ಯಪಾಲರ ಒಪ್ಪಿಗೆಯೊಂದಿಗೆ ಸುಗ್ರೀವಾಜ್ಷೆ ಮೂಲಕ ಈ ವ್ಯವಸ್ಥೆಯನ್ನು ಈಗಾಗಲೇ ಜಾರಿಗೆ ತರಲಾಗಿದೆ. ಪ್ರಸ್ತುತ ಸದನದಲ್ಲಿ ಇದಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ಅವರು ತಿಳಿಸಿದರು.
ಮದ್ಯ ಮಾಡಲು ಉಪಯೋಗವಾಗುವ ಸ್ಪಿರಿಟ್‌ಗೆ ತೆರಿಗೆ ವಿಧಿಸುವ ಅಧಿಕಾರದ ನಡುವೆ ರಾಜ್ಯ-ಕೇಂದ್ರ ಸರ್ಕಾರಗಳ ನಡುವೆ ತಕರಾರು ಈ ಹಿಂದಿನಿಂದಲೂ ಇತ್ತು. ಆದರೆ, ಇದೀಗ ಸ್ಪಿರಿಟ್ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಇದರ ಮೇಲೆ ಜಿಎಸ್‌ಟಿ ತೆರಿಗೆ ವಿಧಿಸಬಾರದು ಎಂದು ಜಿಎಸ್‌ಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಸ್ಪಿರಿಟ್ ಅನ್ನು ಜಿಎಸ್‌ಟಿಯಿಂದ ತೆಗೆದು ಹಾಕುತ್ತಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡರು ಸದನಕ್ಕೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು