1:34 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ 112 ಪೊಲೀಸರು

17/12/2024, 10:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆದರೆ 112 ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ. ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಸಮೀಪ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಆದರೆ ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ. ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು. ಪೊಲೀಸರ ಕ್ಷಿಪ್ರವಾದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು