12:07 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ: ಶ್ರದ್ಧಾಭಕ್ತಿಯಿಂದ ನಡೆದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆ

18/12/2024, 14:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmsil.com

ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಪವಿತ್ರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವ ದ ಅಂಗವಾಗಿ ಎರಡನೇ ದಿನವಾದ ಮಂಗಳವಾರ ರಾತ್ರಿ ದೇವಾಲಯದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆಯು ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಶ್ರೀ ಕ್ಷೇತ್ರ ಶಬರಿಮಲೆ ಮಾದರಿಯಲ್ಲಿಯೇ ಅಲ್ಲಿನ ಅರ್ಚಕರುಗಳಿಂದಲೇ ಪವಿತ್ರ ಪಡಿ ಪೂಜೆಯನ್ನು ನಡೆಸಲಾಯಿತು. ಪಡಿ ಪೂಜೆ ಅಂಗವಾಗಿ ಪವಿತ್ರ 18 ಮೆಟ್ಟಿಲುಗಳು ಸೇರಿದಂತೆ ದೇವಾಲಯದ ಒಳ ಹಾಗು ಹೊರ ಆವರಣಗಳನ್ನು ವಿಶೇಷವಾಗಿ ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
18 ಮೆಟ್ಟಿಲುಗಳಿಗೂ 18 ಕಳಶಗಳನ್ನು ಪ್ರತಿಷ್ಠಾಪಿಸಿ ಅವುಗಳಿಗೆ ಗಂಗಾಜಲ ತುಂಬಿ ಕಳಶಗಳ ಪೂಜೆ ಮಾಡಲಾಯಿತು. ನಂತರ ಅದೇ ಗಂಗಾಜಲದಿಂದ 18 ಮೆಟ್ಟಿಲುಗಳನ್ನು ಶುದ್ದಿ ಮಾಡಿ ಮೆಟ್ಟಿಲುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
ಪಡಿ ಪೂಜೆ ಬಳಿಕ ಅಯ್ಯಪ್ಪ ಸ್ವಾಮಿ ಭಕ್ತರ ಹರ್ಷೋದ್ಗಾರದೊಂದಿಗೆ ಗುರುಸ್ವಾಮಿಗಳು ಮಹಿಳಾ ಭಕ್ತರು ಸೇರಿದಂತೆ ನೂರಾರು ಮಾಲಾದಾರಿ ಅಯ್ಯಪ್ಪ ಭಕ್ತರು ಮೆಟ್ಟಿಲುಗಳನ್ನು ಹತ್ತುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಪವಿತ್ರ 18 ಮೆಟ್ಟಿಲುಗಳನ್ನು ಹತ್ತಿ ಬಂದ ಭಕ್ತರು ಕ್ಷೇತ್ರಾಧಿಪತಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಪುಳಕಿತರಾದರು. ನಂತರ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.


ಪೂಜೆ ಬಳಿಕ ಗುರುಸ್ವಾಮಿಗಳಾದ ಪಿ. ದೇವರಾಜಸ್ವಾಮಿ ಮಾತನಾಡಿ ಪಡಿ ಪೂಜೆ ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಮಂಡ್ಯದ ಮಹೇಶ್ ಎಂಬ ದಾನಿಗಳ ಸಹಕಾರದಿಂದ ದೇವಾಲಯದಲ್ಲಿ ಭಕ್ತರ ಅನುಕೂಲಕ್ಕಾಗಿ ರಾತ್ರಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು