9:32 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ: ಶ್ರದ್ಧಾಭಕ್ತಿಯಿಂದ ನಡೆದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆ

18/12/2024, 14:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmsil.com

ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಪವಿತ್ರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವ ದ ಅಂಗವಾಗಿ ಎರಡನೇ ದಿನವಾದ ಮಂಗಳವಾರ ರಾತ್ರಿ ದೇವಾಲಯದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆಯು ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಶ್ರೀ ಕ್ಷೇತ್ರ ಶಬರಿಮಲೆ ಮಾದರಿಯಲ್ಲಿಯೇ ಅಲ್ಲಿನ ಅರ್ಚಕರುಗಳಿಂದಲೇ ಪವಿತ್ರ ಪಡಿ ಪೂಜೆಯನ್ನು ನಡೆಸಲಾಯಿತು. ಪಡಿ ಪೂಜೆ ಅಂಗವಾಗಿ ಪವಿತ್ರ 18 ಮೆಟ್ಟಿಲುಗಳು ಸೇರಿದಂತೆ ದೇವಾಲಯದ ಒಳ ಹಾಗು ಹೊರ ಆವರಣಗಳನ್ನು ವಿಶೇಷವಾಗಿ ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
18 ಮೆಟ್ಟಿಲುಗಳಿಗೂ 18 ಕಳಶಗಳನ್ನು ಪ್ರತಿಷ್ಠಾಪಿಸಿ ಅವುಗಳಿಗೆ ಗಂಗಾಜಲ ತುಂಬಿ ಕಳಶಗಳ ಪೂಜೆ ಮಾಡಲಾಯಿತು. ನಂತರ ಅದೇ ಗಂಗಾಜಲದಿಂದ 18 ಮೆಟ್ಟಿಲುಗಳನ್ನು ಶುದ್ದಿ ಮಾಡಿ ಮೆಟ್ಟಿಲುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
ಪಡಿ ಪೂಜೆ ಬಳಿಕ ಅಯ್ಯಪ್ಪ ಸ್ವಾಮಿ ಭಕ್ತರ ಹರ್ಷೋದ್ಗಾರದೊಂದಿಗೆ ಗುರುಸ್ವಾಮಿಗಳು ಮಹಿಳಾ ಭಕ್ತರು ಸೇರಿದಂತೆ ನೂರಾರು ಮಾಲಾದಾರಿ ಅಯ್ಯಪ್ಪ ಭಕ್ತರು ಮೆಟ್ಟಿಲುಗಳನ್ನು ಹತ್ತುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಪವಿತ್ರ 18 ಮೆಟ್ಟಿಲುಗಳನ್ನು ಹತ್ತಿ ಬಂದ ಭಕ್ತರು ಕ್ಷೇತ್ರಾಧಿಪತಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಪುಳಕಿತರಾದರು. ನಂತರ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.


ಪೂಜೆ ಬಳಿಕ ಗುರುಸ್ವಾಮಿಗಳಾದ ಪಿ. ದೇವರಾಜಸ್ವಾಮಿ ಮಾತನಾಡಿ ಪಡಿ ಪೂಜೆ ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಮಂಡ್ಯದ ಮಹೇಶ್ ಎಂಬ ದಾನಿಗಳ ಸಹಕಾರದಿಂದ ದೇವಾಲಯದಲ್ಲಿ ಭಕ್ತರ ಅನುಕೂಲಕ್ಕಾಗಿ ರಾತ್ರಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು