6:41 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ: ಶ್ರದ್ಧಾಭಕ್ತಿಯಿಂದ ನಡೆದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆ

18/12/2024, 14:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmsil.com

ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಪವಿತ್ರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವ ದ ಅಂಗವಾಗಿ ಎರಡನೇ ದಿನವಾದ ಮಂಗಳವಾರ ರಾತ್ರಿ ದೇವಾಲಯದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆಯು ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಶ್ರೀ ಕ್ಷೇತ್ರ ಶಬರಿಮಲೆ ಮಾದರಿಯಲ್ಲಿಯೇ ಅಲ್ಲಿನ ಅರ್ಚಕರುಗಳಿಂದಲೇ ಪವಿತ್ರ ಪಡಿ ಪೂಜೆಯನ್ನು ನಡೆಸಲಾಯಿತು. ಪಡಿ ಪೂಜೆ ಅಂಗವಾಗಿ ಪವಿತ್ರ 18 ಮೆಟ್ಟಿಲುಗಳು ಸೇರಿದಂತೆ ದೇವಾಲಯದ ಒಳ ಹಾಗು ಹೊರ ಆವರಣಗಳನ್ನು ವಿಶೇಷವಾಗಿ ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
18 ಮೆಟ್ಟಿಲುಗಳಿಗೂ 18 ಕಳಶಗಳನ್ನು ಪ್ರತಿಷ್ಠಾಪಿಸಿ ಅವುಗಳಿಗೆ ಗಂಗಾಜಲ ತುಂಬಿ ಕಳಶಗಳ ಪೂಜೆ ಮಾಡಲಾಯಿತು. ನಂತರ ಅದೇ ಗಂಗಾಜಲದಿಂದ 18 ಮೆಟ್ಟಿಲುಗಳನ್ನು ಶುದ್ದಿ ಮಾಡಿ ಮೆಟ್ಟಿಲುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
ಪಡಿ ಪೂಜೆ ಬಳಿಕ ಅಯ್ಯಪ್ಪ ಸ್ವಾಮಿ ಭಕ್ತರ ಹರ್ಷೋದ್ಗಾರದೊಂದಿಗೆ ಗುರುಸ್ವಾಮಿಗಳು ಮಹಿಳಾ ಭಕ್ತರು ಸೇರಿದಂತೆ ನೂರಾರು ಮಾಲಾದಾರಿ ಅಯ್ಯಪ್ಪ ಭಕ್ತರು ಮೆಟ್ಟಿಲುಗಳನ್ನು ಹತ್ತುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಪವಿತ್ರ 18 ಮೆಟ್ಟಿಲುಗಳನ್ನು ಹತ್ತಿ ಬಂದ ಭಕ್ತರು ಕ್ಷೇತ್ರಾಧಿಪತಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಪುಳಕಿತರಾದರು. ನಂತರ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.


ಪೂಜೆ ಬಳಿಕ ಗುರುಸ್ವಾಮಿಗಳಾದ ಪಿ. ದೇವರಾಜಸ್ವಾಮಿ ಮಾತನಾಡಿ ಪಡಿ ಪೂಜೆ ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಮಂಡ್ಯದ ಮಹೇಶ್ ಎಂಬ ದಾನಿಗಳ ಸಹಕಾರದಿಂದ ದೇವಾಲಯದಲ್ಲಿ ಭಕ್ತರ ಅನುಕೂಲಕ್ಕಾಗಿ ರಾತ್ರಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು