11:04 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

2025ರ ಮಾರ್ಚ್ ಅಂತ್ಯಕ್ಕೆ ಮತ್ತಷ್ಟು ಕೆಎಸ್ಸಾರ್ಟಿಸಿ ಬಸ್ ಗಳ ಖರೀದಿಗೆ ಕ್ರಮ

18/12/2024, 18:45

ಬೆಳಗಾವಿಸುವರ್ಣಸೌಧ (reporterkarnataka.com): ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್ ಗಳನ್ನು ಖರೀದಿಸಿದ್ದು,ಬರುವ ಮಾರ್ಚ್ ಅಂತ್ಯದೊಳಗೆ ಮತ್ತಷ್ಟು ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಅವರು ಹೇಳಿದರು.
ಈಗಾಗಲೇ‌ ನಾಲ್ಕೂ ಸಾರಿಗೆ ನಿಗಮಗಳಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವರು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಎಸ್. ವಿ. ಸಂಕನೂರ ಅವರ ಕೇಳಿದ ಪ್ರಶ್ನೆಗೆ ಸಾರಿಗೆ ಮತ್ತು ಮುಜರಾಯಿ ಸಚಿವರ ಪರವಾಗಿ ಉತ್ತರಿಸಿದರು.
ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು
ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು