4:58 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಗೃಹಲಕ್ಷ್ಮೀಯರ ಜತೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಫಲಾನುಭವಿಗಳು ಫುಲ್ ಖುಷಿ

18/12/2024, 18:53

ಬೆಳಗಾವಿ(reporterkarnataka.com): ಗೃಹಲಕ್ಷ್ಮೀ ಯೋಜನೆಯ ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು.
ಕುವೆಂಪು ನಗರದಲ್ಲಿರುವ ನಿವಾಸದಿಂದ ಸುವರ್ಣ ವಿಧಾನಸೌಧಕ್ಕೆ ವಿಶೇಷ ವಾಹನದಲ್ಲಿ ಫಲಾನುಭವಿಗಳೊಂದಿಗೆ ಸಚಿವರು ಆಗಮಿಸಿದರು.


ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ, ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದೇ ನಮ್ಮ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪವಂತಾಗಬೇಕು. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ತಿಂಗಳು ಸಿಗುವ 2 ಸಾವಿರ ರೂಪಾಯಿ ಲಕ್ಷಾಂತರ ಹೆಣ್ಣುಮಕ್ಕಳಿಗೆ ಸಹಾಯವಾಗಿದೆ. ಒಬ್ಬರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಂಥಾಲಯ ತೆರೆದರೆ, ಗದಗ ಗಜೇಂದ್ರದಢದ ಅತ್ತೆ-ಸೊಸೆ ಸೇರಿ ತಮ್ಮ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ್ದಾರೆ. ಕಣ್ಣಿನ ಶಸ್ತ್ರಚಿಕಿತ್ಸೆ, ವೈದ್ಯಕೀಯ ಖರ್ಚು ವೆಚ್ಚಗಳು, ಮಕ್ಕಳಿಗೆ ಶಾಲಾ ಫೀಜು, ಮಕ್ಕಳಿಗೆ ಬೈಕ್ ಕೊಡಿಸಿರುವುದು ಹೀಗೆ ಅನೇಕ ರೂಪದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಬಡ ಮಹಿಳೆಯರಿಗೆ ಸಹಾಯವಾಗುತ್ತಿದೆ ಎಂದು ‌ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗೃಹಲಕ್ಷ್ಮೀಯರ ಜೊತೆಗೆ ತೃತೀಯ ಲಿಂಗಿಯರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸುವ ಕೆಲಸ ಆಗುತ್ತಿದೆ. ಯೋಜನೆಯಿಂದ ಆದ ಲಾಭದ ಬಗ್ಗೆ ಫಲಾನುಭವಿಗಳು ಹೇಳಿಕೊಳ್ಳುವಾಗ ಯೋಜನೆ ಜಾರಿಗೆ ತಂದಿದ್ದಕ್ಕೂ ಸಾರ್ಥಕ ಎನಿಸುತ್ತದೆ. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಬೇಕು ಎಂಬುದೇ ನಮ್ಮ ಆಸೆ ಎಂದು ಸಚಿವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಗೃಹಲಕ್ಷ್ಮೀ ಫಲಾನುಭವಿಗಳು ಸಂವಾದ ನಡೆಸಲಿದ್ದು, ವಿಧಾನಸಭೆ ಅಧಿವೇಶನದ ಕಲಾಪ ವೀಕ್ಷಣೆ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದರು.
– *ಸಚಿವರಿಗೆ ದೃಷ್ಟಿ ತೆಗೆದ ಮಂಗಳಮುಖಿಯರು*
ಮಂಗಳಮುಖಿಯರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ದೃಷ್ಟಿ ತೆಗೆದು ಶುಭ ಹಾರೈಸಿದರು.
ನಿಮ್ಮಿಂದ ನಮಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಸಿಗುತ್ತಿದೆ. ನಿಮಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದು ಸಚಿವರಿಗೆ ಕೈಮುಗಿದ ಧನ್ಯವಾದ ಅರ್ಪಿಸಿದರು.
– *ಸಚಿವರಿಗೆ ಹೊಸ ಬೈಕ್ ತೋರಿಸಿದ ಫಲಾನುಭವಿ*
ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವ ಸಣ್ಣಕ್ಕಿ ಗೃಹಲಕ್ಷ್ಮಿಯ ಹಣ ಕೂಡಿಟ್ಟು, ಮಗನಿಗೆ ಬೈಕ್ ಕೊಡಿಸಲು ನೀಡಿರುವ ಹಿನ್ನೆಲೆಯಲ್ಲಿ ಅವರ ಮಗ ಬೆಳಗಾವಿಯ ಸಚಿವರ ನಿವಾಸಕ್ಕೆ ಆಗಮಿಸಿ, ಬೈಕ್ ತೋರಿಸಿ, ಖುಷಿ ಹಂಚಿಕೊಂಡರು.
ನಂತರ ಸಚಿವರು ಗೃಹಲಕ್ಷ್ಮೀಯರ ಜೊತೆಗೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು