12:09 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಗೃಹಲಕ್ಷ್ಮೀಯರ ಜತೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಫಲಾನುಭವಿಗಳು ಫುಲ್ ಖುಷಿ

18/12/2024, 18:53

ಬೆಳಗಾವಿ(reporterkarnataka.com): ಗೃಹಲಕ್ಷ್ಮೀ ಯೋಜನೆಯ ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು.
ಕುವೆಂಪು ನಗರದಲ್ಲಿರುವ ನಿವಾಸದಿಂದ ಸುವರ್ಣ ವಿಧಾನಸೌಧಕ್ಕೆ ವಿಶೇಷ ವಾಹನದಲ್ಲಿ ಫಲಾನುಭವಿಗಳೊಂದಿಗೆ ಸಚಿವರು ಆಗಮಿಸಿದರು.


ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ, ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದೇ ನಮ್ಮ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪವಂತಾಗಬೇಕು. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ತಿಂಗಳು ಸಿಗುವ 2 ಸಾವಿರ ರೂಪಾಯಿ ಲಕ್ಷಾಂತರ ಹೆಣ್ಣುಮಕ್ಕಳಿಗೆ ಸಹಾಯವಾಗಿದೆ. ಒಬ್ಬರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಂಥಾಲಯ ತೆರೆದರೆ, ಗದಗ ಗಜೇಂದ್ರದಢದ ಅತ್ತೆ-ಸೊಸೆ ಸೇರಿ ತಮ್ಮ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ್ದಾರೆ. ಕಣ್ಣಿನ ಶಸ್ತ್ರಚಿಕಿತ್ಸೆ, ವೈದ್ಯಕೀಯ ಖರ್ಚು ವೆಚ್ಚಗಳು, ಮಕ್ಕಳಿಗೆ ಶಾಲಾ ಫೀಜು, ಮಕ್ಕಳಿಗೆ ಬೈಕ್ ಕೊಡಿಸಿರುವುದು ಹೀಗೆ ಅನೇಕ ರೂಪದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಬಡ ಮಹಿಳೆಯರಿಗೆ ಸಹಾಯವಾಗುತ್ತಿದೆ ಎಂದು ‌ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗೃಹಲಕ್ಷ್ಮೀಯರ ಜೊತೆಗೆ ತೃತೀಯ ಲಿಂಗಿಯರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸುವ ಕೆಲಸ ಆಗುತ್ತಿದೆ. ಯೋಜನೆಯಿಂದ ಆದ ಲಾಭದ ಬಗ್ಗೆ ಫಲಾನುಭವಿಗಳು ಹೇಳಿಕೊಳ್ಳುವಾಗ ಯೋಜನೆ ಜಾರಿಗೆ ತಂದಿದ್ದಕ್ಕೂ ಸಾರ್ಥಕ ಎನಿಸುತ್ತದೆ. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಬೇಕು ಎಂಬುದೇ ನಮ್ಮ ಆಸೆ ಎಂದು ಸಚಿವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಗೃಹಲಕ್ಷ್ಮೀ ಫಲಾನುಭವಿಗಳು ಸಂವಾದ ನಡೆಸಲಿದ್ದು, ವಿಧಾನಸಭೆ ಅಧಿವೇಶನದ ಕಲಾಪ ವೀಕ್ಷಣೆ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದರು.
– *ಸಚಿವರಿಗೆ ದೃಷ್ಟಿ ತೆಗೆದ ಮಂಗಳಮುಖಿಯರು*
ಮಂಗಳಮುಖಿಯರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ದೃಷ್ಟಿ ತೆಗೆದು ಶುಭ ಹಾರೈಸಿದರು.
ನಿಮ್ಮಿಂದ ನಮಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಸಿಗುತ್ತಿದೆ. ನಿಮಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದು ಸಚಿವರಿಗೆ ಕೈಮುಗಿದ ಧನ್ಯವಾದ ಅರ್ಪಿಸಿದರು.
– *ಸಚಿವರಿಗೆ ಹೊಸ ಬೈಕ್ ತೋರಿಸಿದ ಫಲಾನುಭವಿ*
ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವ ಸಣ್ಣಕ್ಕಿ ಗೃಹಲಕ್ಷ್ಮಿಯ ಹಣ ಕೂಡಿಟ್ಟು, ಮಗನಿಗೆ ಬೈಕ್ ಕೊಡಿಸಲು ನೀಡಿರುವ ಹಿನ್ನೆಲೆಯಲ್ಲಿ ಅವರ ಮಗ ಬೆಳಗಾವಿಯ ಸಚಿವರ ನಿವಾಸಕ್ಕೆ ಆಗಮಿಸಿ, ಬೈಕ್ ತೋರಿಸಿ, ಖುಷಿ ಹಂಚಿಕೊಂಡರು.
ನಂತರ ಸಚಿವರು ಗೃಹಲಕ್ಷ್ಮೀಯರ ಜೊತೆಗೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು