8:09 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಹೇಳಿಕೆ: ಜಿಎಂ ಸ್ಪಷ್ಟಿಕರಣ

18/12/2024, 19:04

ಮಂಗಳೂರು(reporterkarnataka.com): ಸಾಮಾಜಿಕ ಜಾಲ️ತಾಣದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷರ ಹೆಸರು ಬಳಸಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಸ್ಪಷ್ಟಿಕರಣವನ್ನು ಈ ಕೆಳಗಿನಂತೆ ನೀಡಲಾಗಿದೆ.
ವ್ಯಕ್ತಿಯೊಬ್ಬರು ಎಂ.ಸಿ.ಸಿ. ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡದೇ ಇದ್ದರಿಂದ ಸಾಲ️ ವಸೂಲಾತಿಗಾಗಿ ಕಾನೂನಿನ ಅವಕಾಶದಡಿ ವಸೂಲಾತಿ ಕ್ರಮ ಕೈಗೊಳ್ಳಲಾಗಿತ್ತು. ಅದಲ️್ಲದೆ ಸಾಲ️ಗಾರರಿಗೆ ಬಡ್ಡಿಯಲ್ಲಿ ರಿಯಾಯಿತಿ ನೀಡಿ ಸಾಲ️ವನ್ನು ಮರುಪಾವತಿ ಮಾಡಲು ಒಂದು ಅವಕಾಶವನ್ನು ಸಹ ನೀಡಲಾಗಿತ್ತು. ಅದರೂ ಸಾಲ️ಗಾರರು ಸಾಲ️ವನ್ನು ಮರುಪಾವತಿ ಮಾಡಿರುವುದಿಲ್ಲ.
ಸಾಲ️ಗಾರರು ತಮ್ಮ ಉಳಿತಾಯ ಖಾತೆಯನ್ನು ವಯುಕ್ತಿಕ ನೆಲೆಯಲ್ಲಿ ವ್ಯವಹರಿಸುತ್ತಾ ಬಂದಿರುತ್ತಾರೆ. ಅದರಲ್ಲಿ ಯಾರು ಮಧ್ಯ ಪ್ರವೇಶಿಸಿರಿವುದಿಲ್ಲ. ಅವರು ತಮ್ಮ ವೈಯುಕ್ತಿಕ ಸಮಸ್ಯೆಯಿಂದ ಈ ಕೃತ್ಯವನ್ನು ಎಸಗಿದ್ದು, ಅನಾವಶ್ಯಕವಾಗಿ ಬ್ಯಾಂಕಿನ ಅಧ್ಯಕ್ಷರ ಹೆಸರನ್ನು ಬಳಸಿ ಅಧ್ಯಕ್ಷರ ಮತ್ತು ಬ್ಯಾಂಕಿನ ಹೆಸರು ಹಾಳು ಮಾಡುವ ಪ್ರಯತ್ನ ಮಾಡಲಾಗಿದೆ. ಅದ್ದರಿಂದ ಸಾರ್ವಜನಿಕರು ಹಾಗೂ ಬ್ಯಾಂಕಿನ ಗ್ರಾಹಕರು ಸಾಮಾಜಿಕ ಜಾಲ️ತಾಣದಲ್ಲಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಕಿವಿಕೊಡಬಾರದಾಗಿ ಬ್ಯಾಂಕಿನ ಮಹಾ ಪ್ರಬಂಧಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು