9:57 AM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಹೇಳಿಕೆ: ಜಿಎಂ ಸ್ಪಷ್ಟಿಕರಣ

18/12/2024, 19:04

ಮಂಗಳೂರು(reporterkarnataka.com): ಸಾಮಾಜಿಕ ಜಾಲ️ತಾಣದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷರ ಹೆಸರು ಬಳಸಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಸ್ಪಷ್ಟಿಕರಣವನ್ನು ಈ ಕೆಳಗಿನಂತೆ ನೀಡಲಾಗಿದೆ.
ವ್ಯಕ್ತಿಯೊಬ್ಬರು ಎಂ.ಸಿ.ಸಿ. ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡದೇ ಇದ್ದರಿಂದ ಸಾಲ️ ವಸೂಲಾತಿಗಾಗಿ ಕಾನೂನಿನ ಅವಕಾಶದಡಿ ವಸೂಲಾತಿ ಕ್ರಮ ಕೈಗೊಳ್ಳಲಾಗಿತ್ತು. ಅದಲ️್ಲದೆ ಸಾಲ️ಗಾರರಿಗೆ ಬಡ್ಡಿಯಲ್ಲಿ ರಿಯಾಯಿತಿ ನೀಡಿ ಸಾಲ️ವನ್ನು ಮರುಪಾವತಿ ಮಾಡಲು ಒಂದು ಅವಕಾಶವನ್ನು ಸಹ ನೀಡಲಾಗಿತ್ತು. ಅದರೂ ಸಾಲ️ಗಾರರು ಸಾಲ️ವನ್ನು ಮರುಪಾವತಿ ಮಾಡಿರುವುದಿಲ್ಲ.
ಸಾಲ️ಗಾರರು ತಮ್ಮ ಉಳಿತಾಯ ಖಾತೆಯನ್ನು ವಯುಕ್ತಿಕ ನೆಲೆಯಲ್ಲಿ ವ್ಯವಹರಿಸುತ್ತಾ ಬಂದಿರುತ್ತಾರೆ. ಅದರಲ್ಲಿ ಯಾರು ಮಧ್ಯ ಪ್ರವೇಶಿಸಿರಿವುದಿಲ್ಲ. ಅವರು ತಮ್ಮ ವೈಯುಕ್ತಿಕ ಸಮಸ್ಯೆಯಿಂದ ಈ ಕೃತ್ಯವನ್ನು ಎಸಗಿದ್ದು, ಅನಾವಶ್ಯಕವಾಗಿ ಬ್ಯಾಂಕಿನ ಅಧ್ಯಕ್ಷರ ಹೆಸರನ್ನು ಬಳಸಿ ಅಧ್ಯಕ್ಷರ ಮತ್ತು ಬ್ಯಾಂಕಿನ ಹೆಸರು ಹಾಳು ಮಾಡುವ ಪ್ರಯತ್ನ ಮಾಡಲಾಗಿದೆ. ಅದ್ದರಿಂದ ಸಾರ್ವಜನಿಕರು ಹಾಗೂ ಬ್ಯಾಂಕಿನ ಗ್ರಾಹಕರು ಸಾಮಾಜಿಕ ಜಾಲ️ತಾಣದಲ್ಲಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಕಿವಿಕೊಡಬಾರದಾಗಿ ಬ್ಯಾಂಕಿನ ಮಹಾ ಪ್ರಬಂಧಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು