9:57 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

19/12/2024, 10:07

ಬೆಳಗಾವಿ ಸುವರ್ಣಸೌಧ (reporterkarnataka.com):
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗುರುವಾರ ನಿಯಮ 69 ಅಡಿ ವಕ್ಫ್ ಕುರಿತು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದ್ದ ವಿಚಾರಗಳಿಗೆ ಉತ್ತರಿಸಿ ಅವರು ಮಾತನಾಡಿದರು.


ವಿರೋಧ ಪಕ್ಷಗಳ ಆರೋಪಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿವರವಾಗಿ ಉತ್ತರ ನೀಡಿದ್ದಾರೆ. 1954ರಲ್ಲಿ ವಕ್ಫ್ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಈ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಸಾಧ್ಯವಿಲ್ಲ. ರಾಜ್ಯದಲ್ಲಿ 2008 ರಿಂದ 2013ರ ವರೆಗೆ ಹಾಗೂ 2019 ರಿಂದ 2023ರವೆಗೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತದಲ್ಲಿತ್ತು. ಕೇಂದ್ರದಲ್ಲಿ 2014 ರಿಂದ ಬಿಜೆಪಿ ಅಧಿಕಾರದಲ್ಲಿದೆ. ಆಗ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಆಲೋಚಿಸದೆ, ಈಗ ವಿವಾದ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳೊಂದಿಗೆ ಚರ್ಚಿಸಿ ಒತ್ತುವರಿಯಾದ ವಕ್ಫ್ ಆಸ್ತಿ ತೆರವು ಮಾಡಿ ರಕ್ಷಿಸುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರ ವಿರೋಧ ಪಕ್ಷದ ಎಲ್ಲಾ ಪ್ರಶ್ನೆ ಹಾಗೂ ವಿವಾದಗಳಿಗೆ ಸ್ಪಷ್ಟವಾಗಿ ಉತ್ತರಿಸಿದೆ. ಇದರಿಂದ ಜನರಲ್ಲಿ ಗೊಂದಲವು ದೂರವಾಗಿದೆ. ಇನಾಂ ರದ್ದತಿ ಹಾಗೂ ಭೂ ಸುಧಾರಣೆ ಕಾಯ್ದೆಯಡಿ ಮಂಜೂರಾದ ವಕ್ಫ್ ಜಮೀನುಗಳನ್ನು ಸರ್ಕಾರ ಮುಟ್ಟುವುದಿಲ್ಲ. ವಕ್ಫ್ ಜಾಗದಲ್ಲಿರುವ ಖಬರಸ್ಥಾನ, ದರ್ಗಾ, ಮಸೀದಿಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ. ಒಟ್ಟಾರೆ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 47,263 ಎಕರೆ ಇನಾಂ ರದ್ದತಿ ಹಾಗೂ 23,623 ಎಕರೆ ಭೂ ಸುಧಾರಣೆ ಕಾಯ್ದೆ, 3000 ಎಕರೆ ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸಲಾಗಿದೆ. ಸುಮಾರು 17,969 ಎಕರೆ ವಕ್ಫ್ ಜಮೀನನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿದ್ದಾರೆ. ಇವುಗಳನ್ನು ರಕ್ಷಿಸಲು ಸುಪ್ರಿಂ ಕೋರ್ಟ್ ಆದೇಶವಿದೆ. ಒಮ್ಮೆ ವಕ್ಫ್ ಆಸ್ತಿ ಎಂದು ನಮೂದಾದರೆ ಅದು ಯಾವಾಗಲೂ ವಕ್ಫ್ ಆಸ್ತಿಯಾಗಿಯೇ ಇರುವುದು. ಸರ್ಕಾರದ ಉತ್ತರ ವಿರೋಧ ಪಕ್ಷಗಳು ಸಮಾದಾನ ತರದಿದ್ದರೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ. ಇದರಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು