2:13 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಸವಣ್ಣನ ಆಶಯ ಮುಂದಿನ ಪೀಳಿಗೆಗೆ ತಲುಪಿಸಲು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ: ಕೃಷ್ಣ ಬೈರೇಗೌಡ

19/12/2024, 21:50

*.ಐತಿಹಾಸಿಕ ಪ್ರದೇಶದ ಅಭಿವೃದ್ಧಿಗಾಗಿ ಪ್ರಾಧಿಕಾರ ಅಗತ್ಯವಿದೆ*
*•ಇತರೆ ಪ್ರಾಧಿಕಾರಗಳ ಮಾದರಿಯಲ್ಲೇ ಕಾನೂನು ರಚನೆ*
*•ಎರಡೂ ಸದನದಲ್ಲಿ ಸರ್ವಾನುಮತದಿಂದ ಅಂಗೀಕಾರ*


ಬೆಳಗಾವಿ(reporterkarnataka.com):
ವಿಶ್ವಜ್ಯೋತಿ ಬಸವಣ್ಣನವರ ವಿಚಾರಗಳನ್ನು, ವಿಶ್ವಕ್ಕೆ ಅವರು ನೀಡಿರುವ ಆದರ್ಶಗಳನ್ನು ಇಂದಿನ-ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿಧೇಯಕ ನಿರ್ಮಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಬುಧವಾರ ವಿಧಾನ ಪರಿಷತ್‌ನಲ್ಲಿ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡಿಸಿ ಮಾತನಾಡಿದ ಅವರು, “ಕೂಡಲೇ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ, ಬಸವನ ಬಾಗೇವಾಡಿಯ ಅಭಿವೃದ್ಧಿಯನ್ನೂ ಕೈಗೊಳ್ಳಲಾಗುತ್ತಿತ್ತು. ಆದರೆ, ನಾಡಿನ ಸಾಹಿತ್ಯ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅಚ್ಚಳಿಯದ ಕೊಡುಗೆ ನೀಡಿರುವ ಬಸವನ ಬಾಗೇವಾಡಿ ಇತಿಹಾಸವನ್ನು ಜನರಿಗೆ ತಿಳಿಸಲು ಹಾಗೂ ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸುವ ದೃಷ್ಠಿಯಿಂದ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿಧೇಯಕ ಮಂಡಿಸಲಾಗಿದೆ” ಎಂದರು.
ಮುಂದುವರೆದು, “ಬಸವನ ಬಾಗೇವಾಡಿ ಐತಿಹಾಸಿಕ ಹಿನ್ನೆಲೆ ಇರುವ ಪ್ರದೇಶ. ಹೀಗಾಗಿ ಈ ಪ್ರದೇಶದ ಅಭಿವೃದ್ಧಿಗೂ ಒಂದು ಪ್ರಾಧಿಕಾರ ರಚಿಸಬೇಕು ಎಂದು ಸದನದ ಅನೇಕ ಸದಸ್ಯರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದಾರೆ. ಅವರ ಒತ್ತಾಯ ಹಾಗೂ ನಮ್ಮ ಶ್ರೀಮಂತ ಇತಿಹಾಸವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಪ್ರಾಧಿಕಾರ ರಚಿಸಲಾಗಿದೆ. ಮೊದಮೊದಲು ಕನ್ನಡ ಸಂಸ್ಕೃತಿ ಇಲಾಖೆ ಆಯೋಗದಲ್ಲಿ ಈ ಪ್ರಾಧಿಕಾರದ ರಚನೆ ಸಂಬಂಧಿಸಿದ ಘೋಷಿಸಲಾಗಿತ್ತು. ಆದರೆ, ಪ್ರಾಧಿಕಾರ ಕಂದಾಯ ಇಲಾಖೆ ಅಡಿಯಲ್ಲಿ ಬರುವ ಕಾರಣ ಈ ಜವಾಬ್ದಾರಿಯನ್ನು ನಮಗೆ ವಹಿಸಲಾಗಿದೆ” ಎಂದರು.
“ಪ್ರಾಧಿಕಾರ ರಚನೆ ಸಂಬಂಧಿಸಿ ಕಳೆದ ಒಂದು ವರ್ಷದಿಂದ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಈಗಾಗಲೇ ನಮ್ಮಲ್ಲಿ ಸರ್ವಜ್ಞ, ಕೆಂಪೇಗೌಡ ಸೇರಿದಂತೆ ಹತ್ತಾರು ಪ್ರಾಧಿಕಾರಗಳಿದ್ದು, ಆ ಪ್ರಾಧಿಕಾರಗಳ ಕಾನೂನುಗಳನ್ನೇ ಆಧರಿಸಿ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ. ಈ ಪ್ರಾಧಿಕಾರದ ರಚನೆಯಿಂದ ಇಲ್ಲಿನ ಇತಿಹಾಸವನ್ನು ಜನರಿಗೆ ತಲುಪಿಸುವ ಜೊತೆಗೆ ಪ್ರವಾಸೋದ್ಯಮವೂ ಅಭಿವೃದ್ಧಿಯಾಗಲಿದೆ” ಎಂದು ಅಭಿಪ್ರಾಯಪಟ್ಟರು.
ವಿಧಾನ ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದ್ದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿಯವರು ಪರಿಷತ್‌ನಲ್ಲೂ ಮತಕ್ಕೆ ಹಾಕಿದರು. ವಿಧೇಯಕವು ಪರಿಷತ್‌ನಲ್ಲೂ ಸರ್ವಾನುಮತದಿಂದ ಅಂಗೀಕಾರಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು