12:00 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ; 3 ಮಂದಿ ಬಂಧನ

19/12/2024, 23:51

ಜಯಾನಂದ ಪೆರಾಜೆ ಮಂಗಳೂರು

info.reporterkarnataka@gmail.com

ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ಅನ್ನು ನಗರದ ಕುಳೂರು ನದಿ ದಂಡೆಯಲ್ಲಿ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ನಡೆಸಿದ ಜಂಟೀ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
2025ರ ಹೊಸ ವರ್ಷ ಸ್ವಾಗತಿಸಲು ದಿನಗಣನೆ ಶುರುವಾಗಿದೆ. ಮಂಗಳೂರು,ಬೆಂಗಳೂರು ಸೇರಿದಂತೆ ಎಲ್ಲೆಡೆ ಹೊಸ ವರ್ಷಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ ಯುವ ಸಮೂಹವಂತೂ ನ್ಯೂ ಇಯರ್ ಸೆಲೆಬ್ರೆಷನ್​​ಗೆ ಭರ್ಜರಿ ಪ್ಲಾನಿಂಗ್​ ನಡೆಸಿದ್ದಾರೆ. ಈ ಮಧ್ಯೆ ಡ್ರಗ್ಸ್ ಮತ್ತು ಮಾದಕ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲಿ 9 ಲಕ್ಷ ರೂ ಮೌಲ್ಯದ ಮಾದಕವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದಲ್ಲಿ ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಳೂರು ನದಿ ದಂಡೆಯಲ್ಲಿ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ದೇವರಾಜ್, ಮೊಹಮ್ಮದ್ ಫರ್ವೆಜ್ ಉಮರ್, ಶೇಖ್ ತಹೀಮ್ ಬಂಧಿತ ಆರೋಪಿಗಳು.
5 ಕೆಜಿ ಗಾಂಜಾ, 100 ಗ್ರಾಂ ಎಂಡಿಎಂಎ, 7 ಗ್ರಾಂ ಕೋಕೆನ್, 17 ಗ್ರಾಂ ಎಂಡಿಎಂಎ ಪಿಲ್ಸ್, 100 ಗ್ರಾಂ ಚರಸ್, 8 ಗ್ರಾಂ ಹೈಡ್ರೋವಿಡ್ ಗಾಂಜಾ ಮತ್ತು 3 ಎಲ್​​ಎಸ್​ಡಿ ಸ್ಟ್ರಿಪ್ಸ್ ಸೇರಿದಂತೆ ಹರಿತವಾದ ಚಾಕು, ಮಾದಕ ವಸ್ತು ಸಾಗಾಟ ಮಾಡಲು ಉಪಯೋಗಿಸಿದ ಕಾರು ಮತ್ತು ಸ್ಕೂಟರ್ ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು