12:55 AM Friday20 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ; 3 ಮಂದಿ ಬಂಧನ

19/12/2024, 23:51

ಜಯಾನಂದ ಪೆರಾಜೆ ಮಂಗಳೂರು

info.reporterkarnataka@gmail.com

ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ಅನ್ನು ನಗರದ ಕುಳೂರು ನದಿ ದಂಡೆಯಲ್ಲಿ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ನಡೆಸಿದ ಜಂಟೀ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
2025ರ ಹೊಸ ವರ್ಷ ಸ್ವಾಗತಿಸಲು ದಿನಗಣನೆ ಶುರುವಾಗಿದೆ. ಮಂಗಳೂರು,ಬೆಂಗಳೂರು ಸೇರಿದಂತೆ ಎಲ್ಲೆಡೆ ಹೊಸ ವರ್ಷಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ ಯುವ ಸಮೂಹವಂತೂ ನ್ಯೂ ಇಯರ್ ಸೆಲೆಬ್ರೆಷನ್​​ಗೆ ಭರ್ಜರಿ ಪ್ಲಾನಿಂಗ್​ ನಡೆಸಿದ್ದಾರೆ. ಈ ಮಧ್ಯೆ ಡ್ರಗ್ಸ್ ಮತ್ತು ಮಾದಕ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲಿ 9 ಲಕ್ಷ ರೂ ಮೌಲ್ಯದ ಮಾದಕವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದಲ್ಲಿ ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಳೂರು ನದಿ ದಂಡೆಯಲ್ಲಿ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ದೇವರಾಜ್, ಮೊಹಮ್ಮದ್ ಫರ್ವೆಜ್ ಉಮರ್, ಶೇಖ್ ತಹೀಮ್ ಬಂಧಿತ ಆರೋಪಿಗಳು.
5 ಕೆಜಿ ಗಾಂಜಾ, 100 ಗ್ರಾಂ ಎಂಡಿಎಂಎ, 7 ಗ್ರಾಂ ಕೋಕೆನ್, 17 ಗ್ರಾಂ ಎಂಡಿಎಂಎ ಪಿಲ್ಸ್, 100 ಗ್ರಾಂ ಚರಸ್, 8 ಗ್ರಾಂ ಹೈಡ್ರೋವಿಡ್ ಗಾಂಜಾ ಮತ್ತು 3 ಎಲ್​​ಎಸ್​ಡಿ ಸ್ಟ್ರಿಪ್ಸ್ ಸೇರಿದಂತೆ ಹರಿತವಾದ ಚಾಕು, ಮಾದಕ ವಸ್ತು ಸಾಗಾಟ ಮಾಡಲು ಉಪಯೋಗಿಸಿದ ಕಾರು ಮತ್ತು ಸ್ಕೂಟರ್ ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು