9:33 AM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

19/12/2024, 23:58

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

ಮಂಗಳೂರು(reporterkarnataka.com):
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ‌‌.ಟಿ.ರವಿ ಯವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಸಹೋದರ ಚೆನ್ನರಾಜ ಮತ್ತು ಆಪ್ತ ಸಹಾಯಕ ಸದ್ದಾಂ ಮತ್ತು ಸಂಗಡಿಗರು ಹಲ್ಲೆ ಮಾಡುವುದರ ಮೂಲಕ ತಮ್ಮ ಗೂಂಡಾ ಪ್ರವೃತ್ತಿಯನ್ನು ರಾಜ್ಯದ ಶಕ್ತಿ ಕೇಂದ್ರವಾದ ಸುವರ್ಣ ಸೌಧದ ಒಳಗೂ ಆರಂಭಿಸಿ ಅತೀ ಕೆಟ್ಟ ಘಟನೆಗೆ ಕಾರಣರಾಗಿದ್ದಾರೆ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಭೃಷ್ಟಾಚಾರ ಮಾಡಿದರೂ ಮೊಂಡುತನ ತೋರುವ ಸಿದ್ದರಾಮಯ್ಯನ ನಡವಳಿಕೆ ಕಾಂಗ್ರೇಸಿಗರ ಭಂಡತನಕ್ಕೆ ದಾರಿ ಮಾಡಿದಂತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ನ ಸದಸ್ಯರಾದ ಕಿಶೋರ್ ಕುಮಾರ್ ರವರ ಮೇಲೂ ಹಲ್ಲೆ ನಡೆಸಿರುವುದನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಖಂಡಿಸಿದ್ದಾರೆ.
ಸುವರ್ಣ ಸೌಧದಲ್ಲಿ ಆಗಿರುವ ಭದ್ರತಾ ವೈಫಲ್ಯಕ್ಕೆ ಮತ್ತು ಆಗಿರುವ ಘಟನೆಗೆ ಮುಖ್ಯಮಂತ್ರಿಗಳು ಕ್ಷಮೆಯಾಚಿಸಬೇಕು ಮತ್ತು ಹಲ್ಲೆಕೋರರಿಗೆ ಶಿಕ್ಷೆಯಾಗ ಬೇಕೆಂದು ಅವರು ಆಗ್ರಹಿಸಿದ್ದಾರೆ.
ಜನಪ್ರತಿನಿಧಿಗಳಿಗೆ ರಾಜ್ಯದ ಶಕ್ತಿಕೇಂದ್ರದಲ್ಲೇ ರಕ್ಷಣೆ ಇಲ್ಲದಿರುವುದು ಅತ್ಯಂತ ಕಳವಳಕಾರಿ ಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕೇವಲ ಈ ರೀತಿಯ ಘಟನೆಗಳಿಂದ ರಾಜ್ಯ ಸುದ್ದಿಯಾಗುತ್ತಿರುವುದು ಬಹಳ ಖೇದಕರ. ಉತ್ತರ ಕರ್ಣಾಟಕದ ಜನತೆಯ ಬೇಡಿಕೆ ಮತ್ತು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಯಾಗಬೇಕಿದ್ದ ಸುವರ್ಣ ಸೌಧ ಗೂಂಡತನಕ್ಕೆ ಸಾಕ್ಷಿಯಾಗಿರುವುದು ನಾಚಿಕೆಗೇಡು. ಜತೆಯಲ್ಲಿ ಸಾರ್ವಜನಿಕರಿಗೆ ಕಾಂಗ್ರೆಸಿಗರಿಂದ ಆಗುತ್ತಿರುವ ಅನ್ಯಾಯದ ಪಾಡು ಕೇಳಂದತಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು