5:33 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

19/12/2024, 23:58

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

ಮಂಗಳೂರು(reporterkarnataka.com):
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ‌‌.ಟಿ.ರವಿ ಯವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಸಹೋದರ ಚೆನ್ನರಾಜ ಮತ್ತು ಆಪ್ತ ಸಹಾಯಕ ಸದ್ದಾಂ ಮತ್ತು ಸಂಗಡಿಗರು ಹಲ್ಲೆ ಮಾಡುವುದರ ಮೂಲಕ ತಮ್ಮ ಗೂಂಡಾ ಪ್ರವೃತ್ತಿಯನ್ನು ರಾಜ್ಯದ ಶಕ್ತಿ ಕೇಂದ್ರವಾದ ಸುವರ್ಣ ಸೌಧದ ಒಳಗೂ ಆರಂಭಿಸಿ ಅತೀ ಕೆಟ್ಟ ಘಟನೆಗೆ ಕಾರಣರಾಗಿದ್ದಾರೆ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಭೃಷ್ಟಾಚಾರ ಮಾಡಿದರೂ ಮೊಂಡುತನ ತೋರುವ ಸಿದ್ದರಾಮಯ್ಯನ ನಡವಳಿಕೆ ಕಾಂಗ್ರೇಸಿಗರ ಭಂಡತನಕ್ಕೆ ದಾರಿ ಮಾಡಿದಂತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ನ ಸದಸ್ಯರಾದ ಕಿಶೋರ್ ಕುಮಾರ್ ರವರ ಮೇಲೂ ಹಲ್ಲೆ ನಡೆಸಿರುವುದನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಖಂಡಿಸಿದ್ದಾರೆ.
ಸುವರ್ಣ ಸೌಧದಲ್ಲಿ ಆಗಿರುವ ಭದ್ರತಾ ವೈಫಲ್ಯಕ್ಕೆ ಮತ್ತು ಆಗಿರುವ ಘಟನೆಗೆ ಮುಖ್ಯಮಂತ್ರಿಗಳು ಕ್ಷಮೆಯಾಚಿಸಬೇಕು ಮತ್ತು ಹಲ್ಲೆಕೋರರಿಗೆ ಶಿಕ್ಷೆಯಾಗ ಬೇಕೆಂದು ಅವರು ಆಗ್ರಹಿಸಿದ್ದಾರೆ.
ಜನಪ್ರತಿನಿಧಿಗಳಿಗೆ ರಾಜ್ಯದ ಶಕ್ತಿಕೇಂದ್ರದಲ್ಲೇ ರಕ್ಷಣೆ ಇಲ್ಲದಿರುವುದು ಅತ್ಯಂತ ಕಳವಳಕಾರಿ ಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕೇವಲ ಈ ರೀತಿಯ ಘಟನೆಗಳಿಂದ ರಾಜ್ಯ ಸುದ್ದಿಯಾಗುತ್ತಿರುವುದು ಬಹಳ ಖೇದಕರ. ಉತ್ತರ ಕರ್ಣಾಟಕದ ಜನತೆಯ ಬೇಡಿಕೆ ಮತ್ತು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಯಾಗಬೇಕಿದ್ದ ಸುವರ್ಣ ಸೌಧ ಗೂಂಡತನಕ್ಕೆ ಸಾಕ್ಷಿಯಾಗಿರುವುದು ನಾಚಿಕೆಗೇಡು. ಜತೆಯಲ್ಲಿ ಸಾರ್ವಜನಿಕರಿಗೆ ಕಾಂಗ್ರೆಸಿಗರಿಂದ ಆಗುತ್ತಿರುವ ಅನ್ಯಾಯದ ಪಾಡು ಕೇಳಂದತಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು