2:26 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

19/12/2024, 23:58

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

ಮಂಗಳೂರು(reporterkarnataka.com):
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ‌‌.ಟಿ.ರವಿ ಯವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಸಹೋದರ ಚೆನ್ನರಾಜ ಮತ್ತು ಆಪ್ತ ಸಹಾಯಕ ಸದ್ದಾಂ ಮತ್ತು ಸಂಗಡಿಗರು ಹಲ್ಲೆ ಮಾಡುವುದರ ಮೂಲಕ ತಮ್ಮ ಗೂಂಡಾ ಪ್ರವೃತ್ತಿಯನ್ನು ರಾಜ್ಯದ ಶಕ್ತಿ ಕೇಂದ್ರವಾದ ಸುವರ್ಣ ಸೌಧದ ಒಳಗೂ ಆರಂಭಿಸಿ ಅತೀ ಕೆಟ್ಟ ಘಟನೆಗೆ ಕಾರಣರಾಗಿದ್ದಾರೆ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಭೃಷ್ಟಾಚಾರ ಮಾಡಿದರೂ ಮೊಂಡುತನ ತೋರುವ ಸಿದ್ದರಾಮಯ್ಯನ ನಡವಳಿಕೆ ಕಾಂಗ್ರೇಸಿಗರ ಭಂಡತನಕ್ಕೆ ದಾರಿ ಮಾಡಿದಂತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ನ ಸದಸ್ಯರಾದ ಕಿಶೋರ್ ಕುಮಾರ್ ರವರ ಮೇಲೂ ಹಲ್ಲೆ ನಡೆಸಿರುವುದನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಖಂಡಿಸಿದ್ದಾರೆ.
ಸುವರ್ಣ ಸೌಧದಲ್ಲಿ ಆಗಿರುವ ಭದ್ರತಾ ವೈಫಲ್ಯಕ್ಕೆ ಮತ್ತು ಆಗಿರುವ ಘಟನೆಗೆ ಮುಖ್ಯಮಂತ್ರಿಗಳು ಕ್ಷಮೆಯಾಚಿಸಬೇಕು ಮತ್ತು ಹಲ್ಲೆಕೋರರಿಗೆ ಶಿಕ್ಷೆಯಾಗ ಬೇಕೆಂದು ಅವರು ಆಗ್ರಹಿಸಿದ್ದಾರೆ.
ಜನಪ್ರತಿನಿಧಿಗಳಿಗೆ ರಾಜ್ಯದ ಶಕ್ತಿಕೇಂದ್ರದಲ್ಲೇ ರಕ್ಷಣೆ ಇಲ್ಲದಿರುವುದು ಅತ್ಯಂತ ಕಳವಳಕಾರಿ ಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕೇವಲ ಈ ರೀತಿಯ ಘಟನೆಗಳಿಂದ ರಾಜ್ಯ ಸುದ್ದಿಯಾಗುತ್ತಿರುವುದು ಬಹಳ ಖೇದಕರ. ಉತ್ತರ ಕರ್ಣಾಟಕದ ಜನತೆಯ ಬೇಡಿಕೆ ಮತ್ತು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಯಾಗಬೇಕಿದ್ದ ಸುವರ್ಣ ಸೌಧ ಗೂಂಡತನಕ್ಕೆ ಸಾಕ್ಷಿಯಾಗಿರುವುದು ನಾಚಿಕೆಗೇಡು. ಜತೆಯಲ್ಲಿ ಸಾರ್ವಜನಿಕರಿಗೆ ಕಾಂಗ್ರೆಸಿಗರಿಂದ ಆಗುತ್ತಿರುವ ಅನ್ಯಾಯದ ಪಾಡು ಕೇಳಂದತಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು