8:58 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

19/12/2024, 23:58

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

ಮಂಗಳೂರು(reporterkarnataka.com):
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ‌‌.ಟಿ.ರವಿ ಯವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಸಹೋದರ ಚೆನ್ನರಾಜ ಮತ್ತು ಆಪ್ತ ಸಹಾಯಕ ಸದ್ದಾಂ ಮತ್ತು ಸಂಗಡಿಗರು ಹಲ್ಲೆ ಮಾಡುವುದರ ಮೂಲಕ ತಮ್ಮ ಗೂಂಡಾ ಪ್ರವೃತ್ತಿಯನ್ನು ರಾಜ್ಯದ ಶಕ್ತಿ ಕೇಂದ್ರವಾದ ಸುವರ್ಣ ಸೌಧದ ಒಳಗೂ ಆರಂಭಿಸಿ ಅತೀ ಕೆಟ್ಟ ಘಟನೆಗೆ ಕಾರಣರಾಗಿದ್ದಾರೆ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಭೃಷ್ಟಾಚಾರ ಮಾಡಿದರೂ ಮೊಂಡುತನ ತೋರುವ ಸಿದ್ದರಾಮಯ್ಯನ ನಡವಳಿಕೆ ಕಾಂಗ್ರೇಸಿಗರ ಭಂಡತನಕ್ಕೆ ದಾರಿ ಮಾಡಿದಂತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ನ ಸದಸ್ಯರಾದ ಕಿಶೋರ್ ಕುಮಾರ್ ರವರ ಮೇಲೂ ಹಲ್ಲೆ ನಡೆಸಿರುವುದನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಖಂಡಿಸಿದ್ದಾರೆ.
ಸುವರ್ಣ ಸೌಧದಲ್ಲಿ ಆಗಿರುವ ಭದ್ರತಾ ವೈಫಲ್ಯಕ್ಕೆ ಮತ್ತು ಆಗಿರುವ ಘಟನೆಗೆ ಮುಖ್ಯಮಂತ್ರಿಗಳು ಕ್ಷಮೆಯಾಚಿಸಬೇಕು ಮತ್ತು ಹಲ್ಲೆಕೋರರಿಗೆ ಶಿಕ್ಷೆಯಾಗ ಬೇಕೆಂದು ಅವರು ಆಗ್ರಹಿಸಿದ್ದಾರೆ.
ಜನಪ್ರತಿನಿಧಿಗಳಿಗೆ ರಾಜ್ಯದ ಶಕ್ತಿಕೇಂದ್ರದಲ್ಲೇ ರಕ್ಷಣೆ ಇಲ್ಲದಿರುವುದು ಅತ್ಯಂತ ಕಳವಳಕಾರಿ ಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕೇವಲ ಈ ರೀತಿಯ ಘಟನೆಗಳಿಂದ ರಾಜ್ಯ ಸುದ್ದಿಯಾಗುತ್ತಿರುವುದು ಬಹಳ ಖೇದಕರ. ಉತ್ತರ ಕರ್ಣಾಟಕದ ಜನತೆಯ ಬೇಡಿಕೆ ಮತ್ತು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಯಾಗಬೇಕಿದ್ದ ಸುವರ್ಣ ಸೌಧ ಗೂಂಡತನಕ್ಕೆ ಸಾಕ್ಷಿಯಾಗಿರುವುದು ನಾಚಿಕೆಗೇಡು. ಜತೆಯಲ್ಲಿ ಸಾರ್ವಜನಿಕರಿಗೆ ಕಾಂಗ್ರೆಸಿಗರಿಂದ ಆಗುತ್ತಿರುವ ಅನ್ಯಾಯದ ಪಾಡು ಕೇಳಂದತಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು